ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ಪಲ್ಟಿ ; ಎಸ್ಪಿ, ಇನ್ಸ್ ಪೆಕ್ಟರ್ ಅಪಾಯದಿಂದ ಪಾರು

16-06-26 05:10 pm       HK News Staffer   ಕ್ರೈಂ

ಧರ್ಮಸ್ಥಳ ಶವ ಹೂತ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತನಿಖಾ ತಂಡದ ಎಸ್ಪಿ ಸಿಎ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾಗಿ ಬಿದ್ದಿದ್ದು ಅಧಿಕಾರಿಗಳು ಅಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು, ಜೂನ್ 16: ಧರ್ಮಸ್ಥಳ ಶವ ಹೂತ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತನಿಖಾ ತಂಡದ ಎಸ್ಪಿ ಸಿಎ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾಗಿ ಬಿದ್ದಿದ್ದು ಅಧಿಕಾರಿಗಳು ಅಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ. 

ಬೆಳ್ತಂಗಡಿಯಿಂದ  ಚಾರ್ಮಾಡಿ ಘಾಟಿಯಲ್ಲಿ ಚಿಕ್ಕಮಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್ಪಿ ಸಿ.ಎ.ಸೈಮನ್ ಮತ್ತು ಇನ್ಸ್‌ಪೆಕ್ಟರ್ ಕುಸುಮಾಧರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಹಿಂದೆ ಎಸ್ಐಟಿ ಎಸ್ಪಿಯಾಗಿದ್ದು ಈಗ ಚಿಕ್ಕಮಗಳೂರು ಎಸ್ಪಿ ಆಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.‌

ಎಸ್ಐಟಿ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಎಸ್ಪಿ ಜಿತೇಂದ್ರ ಅವರಿಗೆ ಮಾಹಿತಿ ನೀಡಲು ಸೈಮನ್ ಮತ್ತು ಕುಸುಮಾಧರ್ ತೆರಳುತ್ತಿದ್ದರು.‌ ಕಾರಿನಲ್ಲಿದ್ದ ಚಾಲಕ, ಎಸ್ಪಿ ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಉಲ್ಟಾ ಬಿದ್ದಿದ್ದು ಅದರಲ್ಲಿ ಇದ್ದವರು ಹೆಚ್ಚು ಗಾಯಗಳಿಲ್ಲದೆ ಪಾರಾಗಿದ್ದು ವಿಶೇಷ. ‌