ಬ್ರೇಕಿಂಗ್ ನ್ಯೂಸ್
16-06-26 08:32 pm HK News Staffer ಕ್ರೈಂ
ನಾಗ್ಪುರ, ಜೂನ್ 16: ಭಾರತೀಯ ವಾಯುಪಡೆ ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಂತ್ರಸ್ತ ಮಹಿಳೆ (24) ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಆಕೆಯ ಹಳೆಯ ಸಹಪಾಠಿ ಅಯಾಜ್ ತಾಜ್ ಮದಾರೆ (26) ಎಂಬಾತ ಆಸ್ತಿ ವ್ಯವಹಾರದ ನೆಪದಲ್ಲಿ ಹೋಟೆಲ್ ಒಂದಕ್ಕೆ ಕರೆಸಿಕೊಂಡಿದ್ದ. ಅಲ್ಲಿ ಮಹಿಳೆಗೆ ಅಮಲು ಪದಾರ್ಥ ಬೆರೆಸಿದ ಜ್ಯೂಸ್ ನೀಡಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ಸಂದರ್ಭದ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದಾಗಿ ದೂರು ನೀಡಲಾಗಿದೆ.
ಆರೋಪಿ ಅಯಾಜ್ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್ಮೇಲ್ ಮಾಡಿದ್ದು, ಹಲವು ಬಾರಿ ಲೈಂಗಿಕ ಶೋಷಣೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಆಕೆಯಿಂದ ಬರೋಬ್ಬರಿ 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ. ಮೇ 2025 ರಲ್ಲಿ ಆರೋಪಿಯು ಮಹಿಳೆಯನ್ನು ಕಲ್ಮೇಶ್ವರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ತನ್ನ ಸಹಚರರಾದ ಅಮೀನ್ ಶೇಖ್ ಮತ್ತು ಹಜರತ್ ಮೌಲಾನಾ ಎಂಬವರ ಜೊತೆ ಸೇರಿ ಬಲವಂತ ಮತಾಂತರಿಸಲು ವಿಧಿ ವಿಧಾನಗಳನ್ನು ನೆರವೇರಿಸಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯು 'ನನ್ನನ್ನು ಬಿಟ್ಟುಬಿಡಿ' ಎಂದು ಗೋಗರೆಯುತ್ತಿದ್ದರೂ, ಆರೋಪಿ ಆಕೆಯ ಕೈಗಳನ್ನು ಬಲವಂತವಾಗಿ ಹಿಡಿದು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಿರುವುದು ಕಂಡುಬಂದಿದೆ.
ಇತ್ತೀಚೆಗೆ ಕರ್ತವ್ಯ ಮುಗಿಸಿ ಮನೆಗೆ ಮರಳಿದ ತನ್ನ ಪತಿಗೆ ಮಹಿಳೆ ಈ ಎಲ್ಲಾ ವಿಷಯಗಳನ್ನು ತಿಳಿಸಿದ್ದು, ತಕ್ಷಣವೇ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಅತ್ಯಾಚಾರ, ಸುಲಿಗೆ, ಬಲವಂತದ ಧರ್ಮಾಂತರ ಹಾಗೂ ಮಹಾರಾಷ್ಟ್ರದ ಬ್ಲ್ಯಾಕ್ ಮ್ಯಾಜಿಕ್ (ಮಾಟಮಂತ್ರ ನಿಷೇಧ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರಮುಖ ಆರೋಪಿ ಅಯಾಜ್ ಮದಾರೆ ಮತ್ತು ಅಮೀನ್ ಶೇಖ್ನನ್ನು ಬಂಧಿಸಲಾಗಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡ ಮೂರನೇ ಆರೋಪಿ ಹಜರತ್ ಮೌಲಾನಾ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm