ಬ್ರೇಕಿಂಗ್ ನ್ಯೂಸ್
17-06-26 01:41 pm HK News Staffer ಕ್ರೈಂ
ಉಳ್ಳಾಲ, ಜೂ.17: ನಾಲ್ಕು ಮುಸ್ಲಿಂ ಯುವತಿಯರು ಚಲಿಸುತ್ತಿದ್ದ ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಯುವತಿಯರು ಹೆಲ್ಮೆಟ್ ಧರಿಸದೆ ಸ್ಕೂಟರಲ್ಲಿ ನಾಲ್ವರು ಸವಾರಿ ಮಾಡಿ ಹುಚ್ಚಾಟ ಮೆರೆದಿದ್ದಲ್ಲದೆ, ರಸ್ತೆ ಬದಿಗೆ ಬಿದ್ದಿರುವ ಘಟನೆಯ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಿನ್ನೆ ರಾತ್ರಿ ಒಂಭತ್ತು ಗಂಟೆ ಸುಮಾರಿಗೆ ತೊಕ್ಕೊಟ್ಟು ಒಳಪೇಟೆಯ ಎಬಿಸಿ ಕ್ಲಬ್ ಬಳಿ ಘಟನೆ ನಡೆದಿದೆ. ಉಳ್ಳಾಲ ಮೇಲಂಗಡಿಯಿಂದ ಟಿ.ಸಿ ರೋಡ್ ಮಾರ್ಗವಾಗಿ ತೊಕ್ಕೊಟ್ಟು ಒಳಪೇಟೆಗೆ ಸ್ಕೂಟರಲ್ಲಿ ಬರುತ್ತಿದ್ದ ಯುವತಿಯರು ರಸ್ತೆಯ ಹಂಪ್ಸ್ ದಾಟುವಾಗ ನಿಯಂತ್ರಣ ತಪ್ಪಿದ್ದು, ಸ್ಕೂಟರನ್ನ ಎಬಿಸಿ ಕ್ಲಬ್ ಕಡೆಗೆ ನುಗ್ಗಿಸಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆಸಿ, ಕೆಳಗಡೆ ಬಿದ್ದಿದ್ದಾರೆ.




ಘಟನೆ ನಡೆದ ವೇಳೆ ಎಬಿಸಿ ಕ್ಲಬ್ ಒಳಗಡೆ ಸೇರಿದ್ದ ಯುವಕರು ಹೊರಗೆ ಓಡಿ ಬಂದಿದ್ದು, ಸ್ಕೂಟರಿಂದ ಕೆಳಗಡೆ ಬಿದ್ದಿದ್ದ ಯುವತಿಯರನ್ನ ಮೇಲಕ್ಕೆತ್ತಿ ಉಪಚರಿಸಿದ್ದಾರೆ.
ಘಟನೆಯ ವೀಡಿಯೋ ಸಿಸಿ ಕ್ಯಾಮೆರದಲ್ಲಿ ದಾಖಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಉಳ್ಳಾಲ ಮೇಲಂಗಡಿಯ ಅಪ್ರಾಪ್ತ ಕಾಲೇಜು ಯುವತಿಯರು ಸ್ಕೂಟರಲ್ಲಿ ಸವಾರಿ ನಡೆಸಿರುವುದಾಗಿ ಮಾಹಿತಿ ಲಭಿಸಿದೆ. ಏನೋ ಅದೃಷ್ಟವಶಾತ್ ಘಟನೆಯಿಂದ ಸ್ಕೂಟರ್ ನಲ್ಲಿದ್ದ ಯುವತಿಯರು ಸೇರಿದಂತೆ ಪಾದಚಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆಯಿಂದ ಎಬಿಸಿ ಕ್ಲಬ್ ಸದಸ್ಯರ ಎರಡು ದ್ವಿಚಕ್ರ ವಾಹನಗಳಿಗೆ ಹಾನಿಯುಂಟಾಗಿದೆ. ಸಂಚಾರಿ ನಿಯಮಗಳನ್ನ ಗಾಳಿಗೆ ತೂರಿ ಹುಚ್ಚಾಟ ಮೆರೆದ ಯುವತಿಯರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm