ಬ್ರೇಕಿಂಗ್ ನ್ಯೂಸ್
18-06-26 01:20 pm HK News Staffer ಕ್ರೈಂ
ಭಟ್ಕಳ, ಜೂನ್ ̇18: ಇತ್ತೀಚಿನ ದಿನಗಳಲ್ಲಿ ಶಾಂತವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಮತ್ತೆ ಕೋಮು ಉದ್ವಿಗ್ನತೆ ಕಾಣಿಸಿಕೊಂಡಿದೆ. ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಡೆದು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಾಗಿರುವುದನ್ನು ಖಂಡಿಸಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅನುಮಾನಗೊಂಡ ಕೆಲವು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ವಾಹನವನ್ನು ತಡೆದು ಪ್ರಶ್ನಿಸಿದ್ದಾರೆ. “ನೀವಿಬ್ಬರೂ ಎಲ್ಲಿಗೆ ಹೋಗುತ್ತಿದ್ದೀರಿ? ಭಟ್ಕಳದಿಂದ ಸಾಗರದ ಕಾಡು ಪ್ರದೇಶದ ಕಡೆಗೆ ಏಕೆ ತೆರಳುತ್ತಿದ್ದೀರಿ?” ಎಂದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಆದರೆ ಕಾರಿನಲ್ಲಿದ್ದ ಯುವಕ ಮತ್ತು ಯುವತಿಯಿಂದ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಮುಖಂಡರು, ಇಬ್ಬರನ್ನೂ ಭಟ್ಕಳ ಶಹರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆದರೆ ಯುವಕ-ಯುವತಿಯನ್ನು ಠಾಣೆಗೆ ಕರೆತಂದು ಒಪ್ಪಿಸಿದ ಹಿಂದೂ ಮುಖಂಡರ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಸಂಬಂಧಿತ ಯುವಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾತ್ರಿ ತಡರವರೆಗೂ ನಡೆದ ಪ್ರತಿಭಟನೆಯಿಂದ ಠಾಣೆ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ಶಹರ ಪೊಲೀಸ್ ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm