ಬ್ರೇಕಿಂಗ್ ನ್ಯೂಸ್
18-06-26 01:20 pm HK News Staffer ಕ್ರೈಂ
ಭಟ್ಕಳ, ಜೂನ್ ̇18: ಇತ್ತೀಚಿನ ದಿನಗಳಲ್ಲಿ ಶಾಂತವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಮತ್ತೆ ಕೋಮು ಉದ್ವಿಗ್ನತೆ ಕಾಣಿಸಿಕೊಂಡಿದೆ. ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಡೆದು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಾಗಿರುವುದನ್ನು ಖಂಡಿಸಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅನುಮಾನಗೊಂಡ ಕೆಲವು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ವಾಹನವನ್ನು ತಡೆದು ಪ್ರಶ್ನಿಸಿದ್ದಾರೆ. “ನೀವಿಬ್ಬರೂ ಎಲ್ಲಿಗೆ ಹೋಗುತ್ತಿದ್ದೀರಿ? ಭಟ್ಕಳದಿಂದ ಸಾಗರದ ಕಾಡು ಪ್ರದೇಶದ ಕಡೆಗೆ ಏಕೆ ತೆರಳುತ್ತಿದ್ದೀರಿ?” ಎಂದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಆದರೆ ಕಾರಿನಲ್ಲಿದ್ದ ಯುವಕ ಮತ್ತು ಯುವತಿಯಿಂದ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಮುಖಂಡರು, ಇಬ್ಬರನ್ನೂ ಭಟ್ಕಳ ಶಹರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆದರೆ ಯುವಕ-ಯುವತಿಯನ್ನು ಠಾಣೆಗೆ ಕರೆತಂದು ಒಪ್ಪಿಸಿದ ಹಿಂದೂ ಮುಖಂಡರ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಸಂಬಂಧಿತ ಯುವಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾತ್ರಿ ತಡರವರೆಗೂ ನಡೆದ ಪ್ರತಿಭಟನೆಯಿಂದ ಠಾಣೆ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ಶಹರ ಪೊಲೀಸ್ ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm