ಬ್ರೇಕಿಂಗ್ ನ್ಯೂಸ್
19-06-26 08:30 pm HK News Staffer ಕ್ರೈಂ
ಬೆಂಗಳೂರು, ಜೂನ್ 19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಕಳವು ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ವಿಚಿತ್ರ ಘಟನೆಯೊಂದು ನಡೆದಿದೆ. ಪಾದಚಾರಿಯೊಬ್ಬರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಕೆಲವೇ ಕ್ಷಣಗಳಲ್ಲಿ ಫುಟ್ಪಾತ್ ಮೇಲೆಯೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಬ್ಬನ್ಪೇಟೆಯ 14ನೇ ಕ್ರಾಸ್ನಲ್ಲಿ ಜೂನ್ 16ರಂದು ಸಂಜೆ ವೇಳೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಖದೀಮರು ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ.
ಮೊಬೈಲ್ ಕಳೆದುಕೊಂಡ ವ್ಯಕ್ತಿ ತಕ್ಷಣವೇ “ಕಳ್ಳ... ಕಳ್ಳ...” ಎಂದು ಕೂಗಿಕೊಂಡಿದ್ದು, ಅದೇ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಕಾರ್ಮಿಕನೊಬ್ಬ ಸಮಯಪ್ರಜ್ಞೆ ಮೆರೆದಿದ್ದಾನೆ. ಗಾಡಿಯಲ್ಲಿದ್ದ ಮೂಟೆಯನ್ನು ಆರೋಪಿಗಳತ್ತ ಎಸೆದು ತಡೆಯಲು ಯತ್ನಿಸಿದ್ದರಿಂದ ಬೈಕ್ನಲ್ಲಿದ್ದ ಇಬ್ಬರೂ ಸಮತೋಲನ ಕಳೆದುಕೊಂಡಿದ್ದಾರೆ.
ಮೊಬೈಲ್ ಬಿಟ್ಟು ಓಡಿದ ಕಳ್ಳರು
ಬೈಕ್ನಿಂದ ಕೆಳಗೆ ಬಿದ್ದ ಆರೋಪಿಗಳು ಕದ್ದ ಮೊಬೈಲ್ ಬಿಟ್ಟು ಅಲ್ಲಿಂದ ಕಾಲ್ನಡಿಗೆಯಲ್ಲೇ ಪರಾರಿಯಾಗಲು ಯತ್ನಿಸಿದ್ದಾರೆ. ಈ ದೃಶ್ಯ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಓಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು ;
ಮೊಬೈಲ್ ಕಸಿದುಕೊಂಡು ಓಡಿಹೋಗುತ್ತಿದ್ದ ಆರೋಪಿಗಳಲ್ಲಿ ಜುನೈದ್ ಎಂಬಾತ ಸ್ವಲ್ಪ ದೂರ ತೆರಳುತ್ತಿದ್ದಂತೆಯೇ ಫುಟ್ಪಾತ್ ಮೇಲೆ ಕುಸಿದು ಬಿದ್ದಿದ್ದಾನೆ. ಸ್ಥಳದಲ್ಲೇ ಆತನಿಗೆ ಪ್ರಜ್ಞೆ ತಪ್ಪಿದ್ದು, ಬಳಿಕ ಮೃತಪಟ್ಟಿರುವುದು ದೃಢಪಟ್ಟಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಜುನೈದ್ಗೆ ಮೊದಲೇ ಹೃದಯ ಸಂಬಂಧಿ ಸಮಸ್ಯೆ ಇದ್ದಿರಬಹುದು ಎನ್ನಲಾಗಿದ್ದು, ಓಡಾಟ ಮತ್ತು ಆತಂಕದ ನಡುವೆಯೇ ಹೃದಯಾಘಾತ ಸಂಭವಿಸಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮತ್ತೋರ್ವ ಆರೋಪಿ ವಶಕ್ಕೆ ;
ಘಟನೆಯ ಬಳಿಕ ಮತ್ತೋರ್ವ ಆರೋಪಿ ಅರ್ಬಾಜ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಮರಣದ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm