ಬ್ರೇಕಿಂಗ್ ನ್ಯೂಸ್
19-06-26 09:07 pm HK News Staffer ಕ್ರೈಂ
ಬೆಂಗಳೂರು, ಜೂನ್ 19 : ಪೊಲೀಸ್ ಅಧಿಕಾರಿಯೊಬ್ಬರು ದರೋಡೆಕೋರರ ಗ್ಯಾಂಗ್ ಕಟ್ಟಿಕೊಂಡು ಕೇರಳ ಮೂಲದ ಉದ್ಯಮಿಗಳನ್ನು ಹೆದರಿಸಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದರೋಡೆ ಪ್ರಕರಣದಲ್ಲಿ ಸಿಐಡಿ ವಿಭಾಗದ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಮುಖ್ಯ ಸೂತ್ರಧಾರಿಯಾಗಿದ್ದು, ಸದ್ಯ ಪೊಲೀಸರು ದರೋಡೆಗೆ ಬಳಸಿದ್ದ ಅಧಿಕೃತ ಸಿಐಡಿ ಜೀಪನ್ನು ಜಪ್ತಿ ಮಾಡಿದ್ದಾರೆ. ಕೇರಳ ಮೂಲದ ಉದ್ಯಮಿಗಳು ವ್ಯಾಪಾರ ಮತ್ತು ಟ್ರೇಡಿಂಗ್ ಉದ್ದೇಶಗಳಿಗಾಗಿ ಲಕ್ಷಾಂತರ ರೂಪಾಯಿ ನಗದಿನೊಂದಿಗೆ ಬೆಂಗಳೂರಿಗೆ ಬಂದು ಮಡಿವಾಳದ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದರು. ಉದ್ಯಮಿಗಳ ಬಳಿ ದೊಡ್ಡ ಮೊತ್ತದ ಹಣವಿರುವ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ, ಹಣ ಸುಲಿಗೆ ಮಾಡಲು ಸ್ಕೆಚ್ ಹಾಕಿದ್ದರು. ಇದಕ್ಕಾಗಿ ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದರು.
ದಾಳಿಯ ದಿನದಂದು ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ನೇತೃತ್ವದ ತಂಡವು ಹೋಟೆಲ್ ಮುಂಭಾಗದಲ್ಲಿ ಇಲಾಖೆಯ ಅಧಿಕೃತ ಸಿಐಡಿ ಜೀಪನ್ನು ತಂದು ನಿಲ್ಲಿಸಿತ್ತು. ಜೀಪ್ ಒಳಗಡೆ ಇನ್ಸ್ಪೆಕ್ಟರ್ ಮಹೇಶ್ ಕಾಯುತ್ತಿದ್ದರೆ, ಇತ್ತ ಗ್ಯಾಂಗ್ನ ಇಬ್ಬರು ಸದಸ್ಯರು ಹೋಟೆಲ್ ಕೋಣೆಯೊಳಗೆ ನುಗ್ಗಿದ್ದಾರೆ. ತಾವು ಕ್ರೈಮ್ ವಿಭಾಗದ ಪೊಲೀಸರೆಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿದ ಆರೋಪಿಗಳು, "ನೀವು ಅಕ್ರಮವಾಗಿ ಟ್ರೇಡಿಂಗ್ ಮಾಡಲು ಹಣ ತಂದಿದ್ದೀರಿ" ಎಂದು ಉದ್ಯಮಿಗಳನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಇದರಿಂದ ಭಯಭೀತರಾದ ಉದ್ಯಮಿಗಳಿಂದ 20 ಲಕ್ಷ ರೂಪಾಯಿ ಹಣವನ್ನು ದೋಚಿದ ದರೋಡೆಕೋರರು, ಹೊರಗೆ ಕಾಯುತ್ತಿದ್ದ ಅದೇ ಸಿಐಡಿ ಜೀಪ್ ಹತ್ತಿ ಪರಾರಿಯಾಗಿದ್ದಾರೆ. ವಂಚಕರ ಜಾಲಕ್ಕೆ ಬಿದ್ದಿರುವುದು ತಡವಾಗಿ ಅರಿವಾದ ತಕ್ಷಣ ಸಂತ್ರಸ್ತ ಉದ್ಯಮಿಗಳು ಮಡಿವಾಳ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹೋಟೆಲ್ ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ದರೋಡೆಗೆ ಇಲಾಖೆಯ ಜೀಪ್ ಬಳಸಿರುವುದು ಪತ್ತೆಯಾಗಿದೆ.

ತಕ್ಷಣವೇ ಕಾರ್ಯಾಚರಣೆ ನಡೆಸಿದ ಮಡಿವಾಳ ಪೊಲೀಸರು ದರೋಡೆ ಗ್ಯಾಂಗ್ ಸದಸ್ಯನಾದ ಕುಪೇಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಇಡೀ ದರೋಡೆಯ ಮಾಸ್ಟರ್ ಮೈಂಡ್ ಸ್ವತಃ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.
ಇನ್ಸ್ಪೆಕ್ಟರ್ ನಾಪತ್ತೆ, ತೀವ್ರ ಶೋಧ
ತಮ್ಮ ತಂಡದ ಸಹಚರ ಸಿಕ್ಕಿಬೀಳುತ್ತಿದ್ದಂತೆ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಉಳಿದ ನಾಲ್ವರು ಆರೋಪಿಗಳು ರಾತ್ರೋರಾತ್ರಿ ತಲೆಮರೆಸಿಕೊಂಡಿದ್ದಾರೆ. ಸದ್ಯ ಪೊಲೀಸರು ದರೋಡೆಗೆ ಬಳಸಿದ್ದ ಸಿಐಡಿ ಜೀಪನ್ನು ವಶಕ್ಕೆ ಪಡೆದಿದ್ದು, ತಲೆಮರೆಸಿಕೊಂಡ ಪೊಲೀಸ್ ಅಧಿಕಾರಿ ಮತ್ತು ಆತನ ಇತರೆ ಸಹಚರರ ಪತ್ತೆಗಾಗಿ ಬೆಂಗಳೂರು ಹಾಗೂ ನೆರೆ ಜಿಲ್ಲೆಗಳಲ್ಲಿ ವ್ಯಾಪಕ ಜಾಲ ಬೀಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm