ಬ್ರೇಕಿಂಗ್ ನ್ಯೂಸ್
20-06-26 09:13 pm HK News Staffer ಕ್ರೈಂ
ಮಂಗಳೂರು, ಜೂನ್ 20 : ಪತ್ನಿಯನ್ನು ಪತಿಯೇ ಕತ್ತಿಯಿಂದ ಕಡಿದು ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪೇಟೆಯ ಕಜೆ ಎಂಬಲ್ಲಿ ನಡೆದಿದ್ದು ಎರಡು ವರ್ಷದ ಕಂದಮ್ಮ ಅನಾಥವಾಗಿ ಪರಿಣಮಿಸಿದೆ.
ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆ ನಿವಾಸಿ ಸಂಗೀತಾ ಮೃತಪಟ್ಟ ದಂಪತಿ. ಪತಿ ದಿನೇಶ್ ಮತ್ತು ಪತ್ನಿ ಸಂಗೀತಾ ನಡುವೆ ಆಗಿಂದಾಗ್ಗೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಜೂನ್ 19ರ ರಾತ್ರಿ ಪತಿಯೇ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದಂಪತಿ ಇಬ್ಬರೂ ಸೇರಿಕೊಂಡು ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಎರಡು ವರ್ಷದ ಮಗುವಿನೊಂದಿಗೆ ಕಜೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಹೊಟೇಲ್ ಬಂದ್ ಮಾಡಿದ್ದು ದಂಪತಿ ನಡುವೆ ವೈಮನಸ್ಸಿನಿಂದ ಕಲಹ ಉಂಟಾಗಿತ್ತು. ಹೀಗಾಗಿ ಒಂದು ತಿಂಗಳಿನಿಂದ ದಿನೇಶ್ ಮನೆ ಬಿಟ್ಟು ತೆರಳಿದ್ದ. ನಿನ್ನೆ ಏಕಾಏಕಿ ಮನೆಗೆ ಮರಳಿದ್ದು ಪತ್ನಿಯ ಜೊತೆಗೆ ಜಗಳವಾಡಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಇಂದು ಬೆಳಗ್ಗೆ ಮನೆಯಲ್ಲಿ ಯಾವುದೇ ಚಲನವಲನ ಇರಲಿಲ್ಲ. ಸಂಗೀತಾ ತವರು ಮನೆಯಿಂದ ಕರೆ ಮಾಡಿದಾಗ ಮೊಬೈಲ್ ಸ್ವೀಕರಿಸಿರಲಿಲ್ಲ. ಸಂಶಯದಿಂದ ಇವರ ಮನೆ ಕಡೆಗೆ ಬಂದಿದ್ದು ಒಳಗಿನಿಂದ ಬಾಗಿಲು ಹಾಕಿದ್ದನ್ನು ಒಡೆದು ನೋಡಿದಾಗ ಸಂಗೀತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ದಿನೇಶ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ತಾಯಿ ಮೃತಪಟ್ಟಿರುವುದನ್ನು ತಿಳಿಯದೆ ಎರಡು ವರ್ಷದ ಮಗು ಅತ್ತು ಅತ್ತು ಶವದ ಪಕ್ಕದಲ್ಲಿಯೇ ಮಲಗಿತ್ತು. ಕಡಬ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ದಂಪತಿ ದುರಂತ ಸಾವಿಗೀಡಾದ ಹಿನ್ನೆಲೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಅನಾಥವಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm