ಬ್ರೇಕಿಂಗ್ ನ್ಯೂಸ್
20-06-26 09:13 pm HK News Staffer ಕ್ರೈಂ
ಮಂಗಳೂರು, ಜೂನ್ 20 : ಪತ್ನಿಯನ್ನು ಪತಿಯೇ ಕತ್ತಿಯಿಂದ ಕಡಿದು ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪೇಟೆಯ ಕಜೆ ಎಂಬಲ್ಲಿ ನಡೆದಿದ್ದು ಎರಡು ವರ್ಷದ ಕಂದಮ್ಮ ಅನಾಥವಾಗಿ ಪರಿಣಮಿಸಿದೆ.
ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆ ನಿವಾಸಿ ಸಂಗೀತಾ ಮೃತಪಟ್ಟ ದಂಪತಿ. ಪತಿ ದಿನೇಶ್ ಮತ್ತು ಪತ್ನಿ ಸಂಗೀತಾ ನಡುವೆ ಆಗಿಂದಾಗ್ಗೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಜೂನ್ 19ರ ರಾತ್ರಿ ಪತಿಯೇ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದಂಪತಿ ಇಬ್ಬರೂ ಸೇರಿಕೊಂಡು ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಎರಡು ವರ್ಷದ ಮಗುವಿನೊಂದಿಗೆ ಕಜೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಹೊಟೇಲ್ ಬಂದ್ ಮಾಡಿದ್ದು ದಂಪತಿ ನಡುವೆ ವೈಮನಸ್ಸಿನಿಂದ ಕಲಹ ಉಂಟಾಗಿತ್ತು. ಹೀಗಾಗಿ ಒಂದು ತಿಂಗಳಿನಿಂದ ದಿನೇಶ್ ಮನೆ ಬಿಟ್ಟು ತೆರಳಿದ್ದ. ನಿನ್ನೆ ಏಕಾಏಕಿ ಮನೆಗೆ ಮರಳಿದ್ದು ಪತ್ನಿಯ ಜೊತೆಗೆ ಜಗಳವಾಡಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಇಂದು ಬೆಳಗ್ಗೆ ಮನೆಯಲ್ಲಿ ಯಾವುದೇ ಚಲನವಲನ ಇರಲಿಲ್ಲ. ಸಂಗೀತಾ ತವರು ಮನೆಯಿಂದ ಕರೆ ಮಾಡಿದಾಗ ಮೊಬೈಲ್ ಸ್ವೀಕರಿಸಿರಲಿಲ್ಲ. ಸಂಶಯದಿಂದ ಇವರ ಮನೆ ಕಡೆಗೆ ಬಂದಿದ್ದು ಒಳಗಿನಿಂದ ಬಾಗಿಲು ಹಾಕಿದ್ದನ್ನು ಒಡೆದು ನೋಡಿದಾಗ ಸಂಗೀತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ದಿನೇಶ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ತಾಯಿ ಮೃತಪಟ್ಟಿರುವುದನ್ನು ತಿಳಿಯದೆ ಎರಡು ವರ್ಷದ ಮಗು ಅತ್ತು ಅತ್ತು ಶವದ ಪಕ್ಕದಲ್ಲಿಯೇ ಮಲಗಿತ್ತು. ಕಡಬ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ದಂಪತಿ ದುರಂತ ಸಾವಿಗೀಡಾದ ಹಿನ್ನೆಲೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಅನಾಥವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm