ಬ್ರೇಕಿಂಗ್ ನ್ಯೂಸ್
22-06-26 12:53 pm HK News Staffer ಕ್ರೈಂ
ಮಂಗಳೂರು, ಜೂನ್ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ಗೇಟ್ನಲ್ಲಿ ಟೋಲ್ ಶುಲ್ಕ ಪಾವತಿ ವಿಚಾರವಾಗಿ ಉದ್ಭವಿಸಿದ ವಿವಾದ ಭಾರೀ ಗಲಾಟೆಗೆ ತಿರುಗಿದ ಘಟನೆ ಬೆಳಕಿಗೆ ಬಂದಿದೆ. ಟೋಲ್ ಪಾವತಿಸುವುದನ್ನು ತಪ್ಪಿಸಲು ಕೆಲವು ವಾಹನಗಳು ಏಕಮುಖ ಸಂಚಾರ ನಿಯಮ ಉಲ್ಲಂಘಿಸಿ ನುಗ್ಗಿದಲ್ಲದೆ, ಸುರಕ್ಷತಾ ಬ್ಯಾರಿಯರ್ಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿರುವ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬ್ರಹ್ಮರಕೂಟ್ಲು ಟೋಲ್ಗೇಟ್ಗೆ ಆಗಮಿಸಿತ್ತು. ಟೋಲ್ ಸಿಬ್ಬಂದಿ ನಿಯಮಾನುಸಾರ ಶುಲ್ಕ ಪಾವತಿಸುವಂತೆ ಸೂಚಿಸಿದಾಗ, ಚಾಲಕ ಮತ್ತು ವಾಹನದಲ್ಲಿದ್ದ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವಿವಾದ ತೀವ್ರಗೊಂಡ ಬಳಿಕ ಬಸ್ ಚಾಲಕ ಟೋಲ್ ಪಾವತಿಸದೇ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದು, ಈ ವೇಳೆ ಟೋಲ್ಗೇಟ್ನ ಸುರಕ್ಷತಾ ಬೂಮ್ ಬ್ಯಾರಿಯರ್ಗೆ ಡಿಕ್ಕಿ ಹೊಡೆದ ಅಲ್ಲಿಂದ ತೆರಳಿದೆ.


ಇದಾದ ಬಳಿಕ ಅದೇ ತಂಡದೊಂದಿಗೆ ಸಂಚರಿಸುತ್ತಿದ್ದ ಇನ್ನೂ ಕೆಲವು ವಾಹನಗಳು ಸಹ ಟೋಲ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ಏಕಮುಖ ಸಂಚಾರ ಮಾರ್ಗದಲ್ಲೇ ವಾಹನಗಳನ್ನು ನುಗ್ಗಿಸಿ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.
ಘಟನೆಯ ವೇಳೆ ಟೋಲ್ ಸಿಬ್ಬಂದಿ ಮತ್ತು ವಾಹನದಲ್ಲಿದ್ದವರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಟೋಲ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ವಾಹನಗಳು ವೇಗವಾಗಿ ಸಾಗಿದ ಕಾರಣ ಗೊಂದಲ ಉಂಟಾಯಿತು ಎಂದು ಹೇಳಲಾಗಿದೆ.
ಇಡೀ ಘಟನೆ ಟೋಲ್ಗೇಟ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ಟೋಲ್ಗೇಟ್ನ ಸುರಕ್ಷತಾ ವ್ಯವಸ್ಥೆಗೆ ಹಾನಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎನ್ನಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm