ಬ್ರೇಕಿಂಗ್ ನ್ಯೂಸ್
23-06-26 02:15 pm HK News Staffer ಕ್ರೈಂ
ಮಂಗಳೂರು, ಜೂನ್ 23: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ದಿಢೀರ್ ಆಗಿ ಮತ್ತೆ ಬಜ್ಪೆ ಠಾಣೆಗೆ ಬಂದಿದ್ದಾರೆ. ಡಿವೈಎಸ್ಪಿ ರಾಜೀವ್ ಸಿಂಗ್, ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಸೇರಿದಂತೆ ಐವರು ಅಧಿಕಾರಿಗಳ ತಂಡ ಬಜ್ಪೆಗೆ ಆಗಮಿಸಿದೆ.
ಕೆಲವರಿಗೆ ನೋಟೀಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದೆ ಎನ್ನುವ ಮಾಹಿತಿ ಇದೆ. ಅಧಿಕಾರಿಗಳು ಠಾಣೆಯಲ್ಲಿ ಬೀಡು ಬಿಟ್ಟಿದ್ದು, ಕೆಲವು ದಾಖಲಾತಿಗಳನ್ನು ಮುಂದಿಟ್ಟು ಶಂಕಿತರ ಮೇಲೆ ನಿಗಾ ಇಟ್ಟಿದ್ದಾರೆ. ಕಳೆದ ವರ್ಷ 2025ರ ಆಗಸ್ಟ್ 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಜ್ಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು ಎನ್ನಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ತಂಡ ಮರಳಿದ್ದು ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಲಿಂಕ್ ಹೊಂದಿರುವ ಕೆಲವರನ್ನು ವಿಚಾರಣೆಗೆ ಕರೆಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ತನಿಖೆಗೆ ವಹಿಸಲಾಗಿತ್ತು. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ತನಿಖೆಗೆ ಒಳಪಡಿಸಿದ್ದು ಸಂಶಯ ಬಂದ ಅಂಶಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿತ್ತು.
ಬಜಪೆ ಠಾಣೆ ವ್ಯಾಪ್ತಿಯ 10 ಕಡೆ ಹಾಗೂ ಸುರತ್ಕಲ್ ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಕೊಲೆ ಆರೋಪಿಗಳ ಮನೆ ಹಾಗೂ ಎಸ್ ಡಿಪಿಐ ಮುಖಂಡರ ಮನೆಗೆಲಳಿಗೆ ದಾಳಿ ನಡೆಸಿದ್ದರು. ವಶಕ್ಕೆ ಪಡೆದಿದ್ದ ಹಲವು ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು ವರ್ಷದ ನಂತರ ತನಿಖೆ ಸಕ್ರಿಯಗೊಳಿಸಿದ್ದಾರೆ. 2025 ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಎಂಟು ಗಂಟೆ ವೇಳೆಗೆ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯಾಗಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm