ಬ್ರೇಕಿಂಗ್ ನ್ಯೂಸ್
23-06-26 02:15 pm HK News Staffer ಕ್ರೈಂ
ಮಂಗಳೂರು, ಜೂನ್ 23: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ದಿಢೀರ್ ಆಗಿ ಮತ್ತೆ ಬಜ್ಪೆ ಠಾಣೆಗೆ ಬಂದಿದ್ದಾರೆ. ಡಿವೈಎಸ್ಪಿ ರಾಜೀವ್ ಸಿಂಗ್, ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಸೇರಿದಂತೆ ಐವರು ಅಧಿಕಾರಿಗಳ ತಂಡ ಬಜ್ಪೆಗೆ ಆಗಮಿಸಿದೆ.
ಕೆಲವರಿಗೆ ನೋಟೀಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದೆ ಎನ್ನುವ ಮಾಹಿತಿ ಇದೆ. ಅಧಿಕಾರಿಗಳು ಠಾಣೆಯಲ್ಲಿ ಬೀಡು ಬಿಟ್ಟಿದ್ದು, ಕೆಲವು ದಾಖಲಾತಿಗಳನ್ನು ಮುಂದಿಟ್ಟು ಶಂಕಿತರ ಮೇಲೆ ನಿಗಾ ಇಟ್ಟಿದ್ದಾರೆ. ಕಳೆದ ವರ್ಷ 2025ರ ಆಗಸ್ಟ್ 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಜ್ಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು ಎನ್ನಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ತಂಡ ಮರಳಿದ್ದು ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಲಿಂಕ್ ಹೊಂದಿರುವ ಕೆಲವರನ್ನು ವಿಚಾರಣೆಗೆ ಕರೆಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ತನಿಖೆಗೆ ವಹಿಸಲಾಗಿತ್ತು. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ತನಿಖೆಗೆ ಒಳಪಡಿಸಿದ್ದು ಸಂಶಯ ಬಂದ ಅಂಶಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿತ್ತು.
ಬಜಪೆ ಠಾಣೆ ವ್ಯಾಪ್ತಿಯ 10 ಕಡೆ ಹಾಗೂ ಸುರತ್ಕಲ್ ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಕೊಲೆ ಆರೋಪಿಗಳ ಮನೆ ಹಾಗೂ ಎಸ್ ಡಿಪಿಐ ಮುಖಂಡರ ಮನೆಗೆಲಳಿಗೆ ದಾಳಿ ನಡೆಸಿದ್ದರು. ವಶಕ್ಕೆ ಪಡೆದಿದ್ದ ಹಲವು ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು ವರ್ಷದ ನಂತರ ತನಿಖೆ ಸಕ್ರಿಯಗೊಳಿಸಿದ್ದಾರೆ. 2025 ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಎಂಟು ಗಂಟೆ ವೇಳೆಗೆ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm