ಬ್ರೇಕಿಂಗ್ ನ್ಯೂಸ್
29-06-26 06:45 pm HK News Staffer ಕ್ರೈಂ
ಮಂಗಳೂರು, ಜೂನ್ 29: ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಆಸುಪಾಸಿನಲ್ಲಿ ಜೂನ್ 26 ಮತ್ತು 27ರಂದು ಮುಂಜಾನೆ ಎರಡು ಮನೆಗಳಲ್ಲಿ ನಡೆದ ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಜೂನ್ 26ರಂದು ಮುಂಜಾನೆ 02 ಗಂಟೆ ವೇಳೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಅಜಾದ್ ನಗರದ 2ನೇ ಬ್ಲಾಕ್ ನಲ್ಲಿರುವ ಶ್ರೀಮತಿ ಜಾಹೀದ್ ಎಂಬವರು ತನ್ನ ಮನೆಯ ಬೆಡ್ ರೂಮ್ ನಲ್ಲಿ ಮಲಗಿದ್ದಾಗ, ಕಿಟಿಕಿ ಮೂಲಕ ಕೈ ಹಾಕಿದ ವ್ಯಕ್ತಿಯೊಬ್ಬ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಸೆಳೆದು ಸುಲಿಗೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಕರಿಮಣಿ ಸರ ತುಂಡಾಗಿದ್ದು, ಸುಮಾರು 20,000/-ಮೌಲ್ಯದ ಕರಿಮಣಿ ಸರದ ತುಂಡನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಉಳಿದ ಕರಿಮಣಿ ಸರ ಮಹಿಳೆ ಬಳಿಯೇ ಉಳಿದಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ರೀತಿ ಮರುದಿನ 27ರಂದು ಮುಂಜಾನೆ 05 ಗಂಟೆಯಿಂದ 05-15 ಗಂಟೆ ನಡುವೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಫಯಾಜ್ ಎಂಬವರು ಮಸೀದಿಗೆ ಪ್ರಾರ್ಥನೆಗೆಂದು ಹೋದಾಗ ತನ್ನ ಮನೆಯ ಬಾಗಿಲನ್ನು ಮುಚ್ಚಿ ಹೋಗಿದ್ದರು. ಅದೇ ವೇಳೆಗೆ ಕಳ್ಳನೊಬ್ಬ ಬಾಗಿಲನ್ನು ತೆರೆದು ಮನೆಯ ಒಳಗೆ ನುಗ್ಗಿದ್ದು ಬೆಡ್ ರೂಮ್ ನಲ್ಲಿ ಮಲಗಿದ್ದ ಶ್ರೀಮತಿ ಅಪ್ರೀನಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಕಿತ್ತುಕೊಳ್ಳಲು ಯತ್ನಿಸಿದಾಗ ಚಿನ್ನದ ಸರ ತುಂಡಾಗಿದ್ದು, ಸುಮಾರು 1,00,000/-ಮೌಲ್ಯದ ಚಿನ್ನದ ಸರವನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಚಿನ್ನದ ಸಣ್ಣ ತುಂಡು ಹಾಗೂ ಪೆಂಡೆಂಟ್ ಮಹಿಳೆ ಬಳಿ ಉಳಿದಿತ್ತು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಎರಡೂ ಸುಲಿಗೆ ಪ್ರಕರಣಗಳನ್ನು ತನಿಖೆ ನಡೆಸಿದ ಸುರತ್ಕಲ್ ಪೊಲೀಸರು ಆರೋಪಿ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ನನ್ನು ಜೂನ್ 29ರಂದು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿ ಚಿನ್ನಾಭರಣಗಳನ್ನು ಮಾರಾಟ ಮಾಡಲು ಒಯ್ಯುತ್ತಿದ್ದಾಗ ದಸ್ತಗಿರಿ ಮಾಡಿದ್ದಾರೆ. ಆರೋಪಿತನಿಂದ ಎರಡೂ ಕಳವು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ಸ್ವಾಧೀನಪಡಿಸಲಾಗಿದೆ.
ಆರೋಪಿ ಮೊಹಮ್ಮದ್ ಅಬ್ದುಲ್ ಜಾಫರ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೊ.ನಂ. 36/2025 ಕಲಂ: 326 (ಎಫ್), 324(5), 352, 351(3), 3(5) ಬಿ.ಎನ್.ಎಸ್ ಮತ್ತು ಉರ್ವಾ ಪೊಲೀಸ್ ಠಾಣೆ ಮೊ.ನಂ. 123/2018 ಕಲಂ: 341, 323, 504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am