ಬ್ರೇಕಿಂಗ್ ನ್ಯೂಸ್
29-06-26 06:45 pm HK News Staffer ಕ್ರೈಂ
ಮಂಗಳೂರು, ಜೂನ್ 29: ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಆಸುಪಾಸಿನಲ್ಲಿ ಜೂನ್ 26 ಮತ್ತು 27ರಂದು ಮುಂಜಾನೆ ಎರಡು ಮನೆಗಳಲ್ಲಿ ನಡೆದ ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಜೂನ್ 26ರಂದು ಮುಂಜಾನೆ 02 ಗಂಟೆ ವೇಳೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಅಜಾದ್ ನಗರದ 2ನೇ ಬ್ಲಾಕ್ ನಲ್ಲಿರುವ ಶ್ರೀಮತಿ ಜಾಹೀದ್ ಎಂಬವರು ತನ್ನ ಮನೆಯ ಬೆಡ್ ರೂಮ್ ನಲ್ಲಿ ಮಲಗಿದ್ದಾಗ, ಕಿಟಿಕಿ ಮೂಲಕ ಕೈ ಹಾಕಿದ ವ್ಯಕ್ತಿಯೊಬ್ಬ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಸೆಳೆದು ಸುಲಿಗೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಕರಿಮಣಿ ಸರ ತುಂಡಾಗಿದ್ದು, ಸುಮಾರು 20,000/-ಮೌಲ್ಯದ ಕರಿಮಣಿ ಸರದ ತುಂಡನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಉಳಿದ ಕರಿಮಣಿ ಸರ ಮಹಿಳೆ ಬಳಿಯೇ ಉಳಿದಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ರೀತಿ ಮರುದಿನ 27ರಂದು ಮುಂಜಾನೆ 05 ಗಂಟೆಯಿಂದ 05-15 ಗಂಟೆ ನಡುವೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಫಯಾಜ್ ಎಂಬವರು ಮಸೀದಿಗೆ ಪ್ರಾರ್ಥನೆಗೆಂದು ಹೋದಾಗ ತನ್ನ ಮನೆಯ ಬಾಗಿಲನ್ನು ಮುಚ್ಚಿ ಹೋಗಿದ್ದರು. ಅದೇ ವೇಳೆಗೆ ಕಳ್ಳನೊಬ್ಬ ಬಾಗಿಲನ್ನು ತೆರೆದು ಮನೆಯ ಒಳಗೆ ನುಗ್ಗಿದ್ದು ಬೆಡ್ ರೂಮ್ ನಲ್ಲಿ ಮಲಗಿದ್ದ ಶ್ರೀಮತಿ ಅಪ್ರೀನಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಕಿತ್ತುಕೊಳ್ಳಲು ಯತ್ನಿಸಿದಾಗ ಚಿನ್ನದ ಸರ ತುಂಡಾಗಿದ್ದು, ಸುಮಾರು 1,00,000/-ಮೌಲ್ಯದ ಚಿನ್ನದ ಸರವನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಚಿನ್ನದ ಸಣ್ಣ ತುಂಡು ಹಾಗೂ ಪೆಂಡೆಂಟ್ ಮಹಿಳೆ ಬಳಿ ಉಳಿದಿತ್ತು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಎರಡೂ ಸುಲಿಗೆ ಪ್ರಕರಣಗಳನ್ನು ತನಿಖೆ ನಡೆಸಿದ ಸುರತ್ಕಲ್ ಪೊಲೀಸರು ಆರೋಪಿ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ನನ್ನು ಜೂನ್ 29ರಂದು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿ ಚಿನ್ನಾಭರಣಗಳನ್ನು ಮಾರಾಟ ಮಾಡಲು ಒಯ್ಯುತ್ತಿದ್ದಾಗ ದಸ್ತಗಿರಿ ಮಾಡಿದ್ದಾರೆ. ಆರೋಪಿತನಿಂದ ಎರಡೂ ಕಳವು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ಸ್ವಾಧೀನಪಡಿಸಲಾಗಿದೆ.
ಆರೋಪಿ ಮೊಹಮ್ಮದ್ ಅಬ್ದುಲ್ ಜಾಫರ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೊ.ನಂ. 36/2025 ಕಲಂ: 326 (ಎಫ್), 324(5), 352, 351(3), 3(5) ಬಿ.ಎನ್.ಎಸ್ ಮತ್ತು ಉರ್ವಾ ಪೊಲೀಸ್ ಠಾಣೆ ಮೊ.ನಂ. 123/2018 ಕಲಂ: 341, 323, 504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm