ಬ್ರೇಕಿಂಗ್ ನ್ಯೂಸ್
29-06-26 07:25 pm HK News Staffer ಕ್ರೈಂ
ಮಂಗಳೂರು, ಜೂನ್ 29: ಮಂಗಳೂರು ನಗರದ ಕೊಡಿಯಾಲಬೈಲಿನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳಿಸಿದ್ದು ಬಾಂಬ್ ಪತ್ತೆದಳ ಮತ್ತು ಶ್ವಾನದಳ ಪೊಲೀಸರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.
ಮಂಗಳೂರು ಜಿಲ್ಲಾ ಕೋರ್ಟಿನ ಇ-ಮೇಲ್ ವಿಳಾಸಕ್ಕೆ ಅನ್ಬನಂತನ್ ಐಯ್ಯಪ್ಪನ್ ಎಂಬ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು ಕೋರ್ಟ್ ಆವರಣದಲ್ಲಿ ಕೆಮಿಕಲ್ ಬಾಂಬ್ ಇಟ್ಟು ಸ್ಟೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇಸ್ರೇಲ್ ದೂತಾವಾಸದೊಂದಿಗೆ ಮಂಗಳೂರು ನ್ಯಾಯಾಲಯವನ್ನೂ ಜೂನ್ 29ರ ಮಧ್ಯಾಹ್ನ ಒಂದು ಗಂಟೆಗೆ ಬಾಂಬಿಟ್ಟು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ.
ತನ್ನನ್ನು GenZ DMK ಲೀಡರ್ ಎಂದು ಹೇಳಿಕೊಂಡಿರುವ ಅನ್ಬನಂತನ್ ಐಯ್ಯಪ್ಪನ್, ಸಂಸದ ಎನ್. ಆರ್. ಇಳಂಗೋವನ್ ನಾಡಿಗೆ ದ್ರೋಹ ಎಸಗಿದ್ದಾರೆ, ಈ ಕಾರಣಕ್ಕಾಗಿ ಬಾಂಬ್ ಹಾಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಎಲ್ಲಾ ನ್ಯಾಯಾಧೀಶರ ಮೂಗು ಮತ್ತು ಬಾಯಿಗಳನ್ನು ಮುಚ್ಚಿ ಅವರನ್ನು ಕೂಡಲೇ ಸ್ಥಳಾಂತರಿಸಿ ಎಂದು ಬೆದರಿಕೆ ಹಾಕಿದ್ದಾನೆ.
ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಆವರಣದಲ್ಲಿ ಬಾಂಬ್ ಪತ್ತೆ ದಳ ಮತ್ತು ಸ್ವಾನದಳದಿಂದ ಶೋಧ ನಡೆಸಲಾಗಿದೆ. ಕೋರ್ಟ್ ಕಟ್ಟಡದ ಎಲ್ಲ ಕೊಠಡಿಗಳಲ್ಲಿ ಶೋಧ ಕಾರ್ಯಾಚರಣೆ ಮಾಡಲಾಗಿದೆ. ನಿನ್ನೆ ರಾತ್ರಿ ಇಮೇಲ್ ಬಂದಿದ್ದು ಮಂಗಳೂರು ಪೊಲೀಸರು ಮಧ್ಯಾಹ್ನ ವೇಳೆಗೆ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ, ಚಾಮರಾಜನಗರ ಜಿಲ್ಲಾ ಕೋರ್ಟಿಗೂ ಇದೇ ರೀತಿಯ ಇಮೇಲ್ ಸಂದೇಶ ಬಂದಿದೆ. ಎರಡು ದಿನಗಳ ಹಿಂದೆ ಕಾರವಾರ ಮತ್ತು ಬಾಗಲಕೋಟ ಜಿಲ್ಲಾ ನ್ಯಾಯಾಲಯಗಳಿಗೂ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಪೀಠಕ್ಕೂ ಭದ್ರತೆ ಒದಗಿಸಲಾಗಿದೆ. ಜೂನ್ 26ರಂದು ಉಡುಪಿ ಜಿಲ್ಲಾ ಕೋರ್ಟಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm