ಬ್ರೇಕಿಂಗ್ ನ್ಯೂಸ್
01-07-26 04:51 pm HK News Staffer ಕ್ರೈಂ
ತುಮಕೂರು, ಜುಲೈ 01: ಜೂನ್ 27ರಂದು ತುಮಕೂರು - ಶಿರಾ ಎನ್ಎಚ್ 28 ರಸ್ತೆಯಲ್ಲಿ ನಡೆದಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಚ್ಚಾ ಬಾಂಬ್ ಬಳಕೆ ಮಾಡಿರುವುದನ್ನು ಖಚಿತಪಡಿಸಿಕೊಂಡು, ಕಚ್ಚಾ ಬಾಂಬ್ ಸರಬರಾಜು ಮಾಡಿದ್ದ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಗ್ರಾಮದ ಚಂದಾವರ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ತಿಳಿಸಿದ್ದಾರೆ.
ಜೂ.30ರಂದು ತುಮಕೂರು ವಿಶೇಷ ತನಿಖಾ ತಂಡ ಮತ್ತು ಉತ್ತರ ಕನ್ನಡ ಜಿಲ್ಲೆಯ ತನಿಖಾ ತಂಡಗಳು ಜಂಟಿಯಾಗಿ ಕಾಯಾಚರಣೆ ನಡೆಸಿತ್ತು. ಈ ವೇಳೆ ಜಾರ್ಜ್ ನಿಕ್ಲೊವ್ ಫರ್ನಾಂಡೀಸ್ ಎಂಬಾತನು ಕಾರು ಸ್ಫೋಟದಲ್ಲಿ ಮೃತಪಟ್ಟಿರುವ ನಾಗೇಂದ್ರನಿಗೆ ಕಚ್ಚಾ ಬಾಂಬ್ ಕೊಟ್ಟಿರುವುದು ಪತ್ತೆಯಾಗಿದೆ. ಅಲ್ಲದೇ ಸ್ಥಳೀಯ ವ್ಯಕ್ತಿಗಳಾದ ಸಂದೀಪ್ ಗೌಡ, ನಾರಾಯಣ ಡೊಲ್ಲುಗೌಡ ಮತ್ತು ನಾಗರಾಜು ಡೊಲ್ಲುಗೌಡ ಎಂಬುವರಿಗೂ ಆರೋಪಿ ಜಾರ್ಜ್ ಫರ್ನಾಂಡೀಸ್ ಕಚ್ಚಾ ಬಾಂಬ್ಗಳನ್ನು ಕೊಟ್ಟಿರುವುದು ಪತ್ತೆಯಾಗಿದೆ ಎಂದರು.
ಜಾರ್ಜ್ ಸ್ಥಳೀಯವಾಗಿ ಮೀನುಗಾರಿಕೆ ಉದ್ದೇಶಕ್ಕಾಗಿ ಕಚ್ಚಾ ಬಾಂಬ್ ಅನ್ನು ತಯಾರು ಮಾಡಿ ಮಾರಾಟ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಅಲ್ಲದೇ ವಿಚಾರಣೆ ವೇಳೆ ಆರೋಪಿ ಜಾರ್ಜ್ ಅನಾರೋಗ್ಯ ಉಂಟಾಗಿದ್ದರಿಂದ ಅಂಕೋಲಾ ಪೊಲೀಸರು ಕುಮಟಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಆದ ನಂತರ ತನಿಖೆ ಮುಂದುವರಿಸಲಾಗುವುದು ಎಂದರು.
ಜೂ.27ರಂದು ನಡೆದಿದ್ದ ಕಾರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಪತ್ತೆಯಾಗಿದ್ದ ಕಚ್ಚಾ ಬಾಂಬ್ ಅನ್ನು ಸಂರಕ್ಷಿಸಿಡಲಾಗಿತ್ತು. ಕೃತ್ಯ ನಡೆದ ಸ್ಥಳಕ್ಕೆ ಎಫ್ಎಸ್ಎಲ್ ತಂಡದ ಸಿಬ್ಬಂದಿ ಬಂದು ಸ್ಥಳದಲ್ಲಿ ದೊರೆತಿದ್ದ ಕಚ್ಚಾ ಬಾಂಬ್ ಅನ್ನು ಶಿರಾ ನಗರದ ಇಂಡಸ್ಟ್ರೀಯಲ್ ಏರಿಯಾದ ನಿರ್ಜನ ಪ್ರದೇಶದಲ್ಲಿ ಸ್ಫೋಟಿಸಿ ಅದರ ಅವಶೇಷಗಳನ್ನು ಸಂಗ್ರಹಿಸಿ ಎಫ್ಎಸ್ಎಲ್ಗೆ ಕಳುಹಿಸಿಕೊಡಲಾಗಿತ್ತು ಎಂದು ತಿಳಿಸಿದರು.
ಕಚ್ಚಾ ಬಾಂಬ್ ಎಲ್ಲಿಂದ? ಯಾರಿಂದ? ಹೇಗೆ? ದೊರೆಯಿತು ಎಂಬ ಮೂಲವನ್ನು ಪತ್ತೆ ಹಚ್ಚಲು ಶಿರಾ ಉಪವಿಭಾಗದ ಡಿವೈಎಸ್ಪಿ ಬಿ.ಕೆ. ಶೇಖರ್ ಮತ್ತು ಶಿರಾ ಗ್ರಾಮಾಂತರ ವೃತ್ತದ ಸಿಪಿಐ ಡಿ.ಜಿ. ಶ್ರೀನಿವಾಸ್ ನೇತೃತ್ವದಲ್ಲಿ ಆರೋಫಿಗಳನ್ನು ಬಂಧಿಸಲು 15ಕ್ಕೂ ಸಿಬ್ಬಂದಿ ಮತ್ತು 3 ತಂಡಗಳನ್ನು ರಚನೆ ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು.
ಕಾರು ಸ್ಫೋಟಕ್ಕೂ ಮುನ್ನ ನಾಗೇಂದ್ರ ಬಳಿ ಮೂರು ನಾಡಬಾಂಬ್ ಇದ್ದವು ಎಂಬುವುದು ತಿಳಿದು ಬಂದಿದೆ. ಪ್ರಕರಣದ ತನಿಖೆಗೆ 15ಕ್ಕೂ ಹೆಚ್ಚು ಸಿಬ್ಬಂದಿ ಇರುವ 3 ತಂಡಗಳನ್ನು ರಚಿಸಲಾಗಿತ್ತು ಎಂದು ತಿಳಿಸಿದರು.
‘ಶಿರಾ ಗ್ರಾಮಾಂತರ ಸಿಪಿಐ ಡಿ.ಜಿ.ಶ್ರೀನಿವಾಸ, ಪಿಎಸ್ಐಗಳಾದ ಪ್ರವೀಣ್ಕುಮಾರ್, ಭೈರೇಗೌಡ, ಹರೀಶ್, ತೀರ್ಥೇಶ್, ರೇಣುಕಾ ಯಾದವ್, ಸಿಬ್ಬಂದಿ ಕಿರಣ್ಕುಮಾರ್, ಅಬ್ದುಲ್ ಖಲೀಲ್, ರೇಣುಕಪ್ಪ, ಪ್ರಸಾದ್, ಹನುಮಂತಚಾರ್, ಶ್ರೀನಿವಾಸ, ಅಮೀರ್, ಕಾರ್ತಿಕ್, ನಟರಾಜ ನಾಯಕ, ಮಂಜುನಾಥ್, ರಘುಕುಮಾರ್, ಈಶ್ವರ, ನರಸಿಂಹರಾಜು, ರಮೇಶ್, ಜಗದೀಶ್, ವಾಣಿ ಅವರ ತಂಡ ನಾಡ ಬಾಂಬ್ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದೆ’ ಎಂದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm