ಬ್ರೇಕಿಂಗ್ ನ್ಯೂಸ್
02-07-26 08:40 pm HK News Staffer ಕ್ರೈಂ
ಉಡುಪಿ, ಜು. 2: ಶಂಕರಪುರ ಸಮೀಪದ ಕುರ್ಕಾಲು ಪೆಟ್ರೋಲ್ ಬಂಕ್ನಲ್ಲಿ ಏಕೋ ಸ್ಪೋರ್ಟ್ ಕಾರಿಗೆ 4,711ರೂ. ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಮೂವರು ಯುವಕರನ್ನ ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಶಿರ್ವದ ಕೋಟೆಕಾರ ನಿವಾಸಿ ಮೊಹಮ್ಮದ್ ರಿಯಾಜ್ (26), ಶಿರ್ವದ ಭೂತಬೆಟ್ಟು ನಿವಾಸಿ ಮೊಹಮ್ಮದ್ ಅಫ್ರಾಜ್ (23) ಹಾಗೂ ಉಡುಪಿಯ ಅಂಬಾಗಿಲು ನಿವಾಸಿ ಆಶಿಲ್ (21) ಎಂದು ಗುರುತಿಸಲಾಗಿದೆ.

ಜೂನ್ 27ರಂದು ರಾತ್ರಿ ಸುಮಾರು 9.10ಕ್ಕೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಸುಭಾಷ್ ನಗರದ ಪೆಟ್ರೋಲ್ ಪಂಪ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿಯಲ್ಲಿ ದೃಶ್ಯ ಸೆರೆಯಾಗಿತ್ತು.
4,711 ರೂ.ಗೆ ಡೀಸೆಲ್ ತುಂಬಿದ ಬಳಿಕ ಸಿಬ್ಬಂದಿ ಕ್ಯೂಆರ್ ಕೋಡ್ ತೋರಿಸಿದ್ದಾನೆ. ಆರೋಪಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಂತೆ ನಾಟಕವಾಡಿ, ಬಿಲ್ ನೀಡುವಂತೆ ಕೇಳಿದ್ದಾರೆ. ಸಿಬ್ಬಂದಿ ಬಿಲ್ ಕೊಡುವಷ್ಟರಲ್ಲಿ ಹಣ ಪಾವತಿಸದೇ ಪರಾರಿಯಾಗಿದ್ರು.
ತಾಂತ್ರಿಕ ಮಾಹಿತಿ, ಕಾರ್ ನಂಬರ್ ಆಧರಿಸಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ, ಶಿರ್ವ ಪಿಎಸ್ಐ ಮಂಜುನಾಥ ಮರಬಾಡ, ಪಿಎಸ್ಐ ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ್ ಮತ್ತು ದಾರಿಯಪ್ಪ ತಂಡ ಬೆಂಗಳೂರಿನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.
ಪ್ರಕರಣಕ್ಕೆ ಬಳಸಲಾಗಿದ್ದ ಫೋರ್ಡ್ ಎಕೋಸ್ಪೋರ್ಟ್ ಕಾರನ್ನು ವಶಕ್ಕೆ ಪಡೆದಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
02-07-26 09:19 pm
HK News Staffer
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
02-07-26 10:09 pm
HK News Staffer
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm
ಕಾಸರಗೋಡು ; ಶಾಲಾ ಮೈದಾನದಲ್ಲಿ ಕಾರ್ ರೇಸಿಂಗ್, ತಡೆ...
02-07-26 04:21 pm
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm