ಬ್ರೇಕಿಂಗ್ ನ್ಯೂಸ್
02-07-26 08:40 pm HK News Staffer ಕ್ರೈಂ
ಉಡುಪಿ, ಜು. 2: ಶಂಕರಪುರ ಸಮೀಪದ ಕುರ್ಕಾಲು ಪೆಟ್ರೋಲ್ ಬಂಕ್ನಲ್ಲಿ ಏಕೋ ಸ್ಪೋರ್ಟ್ ಕಾರಿಗೆ 4,711ರೂ. ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಮೂವರು ಯುವಕರನ್ನ ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಶಿರ್ವದ ಕೋಟೆಕಾರ ನಿವಾಸಿ ಮೊಹಮ್ಮದ್ ರಿಯಾಜ್ (26), ಶಿರ್ವದ ಭೂತಬೆಟ್ಟು ನಿವಾಸಿ ಮೊಹಮ್ಮದ್ ಅಫ್ರಾಜ್ (23) ಹಾಗೂ ಉಡುಪಿಯ ಅಂಬಾಗಿಲು ನಿವಾಸಿ ಆಶಿಲ್ (21) ಎಂದು ಗುರುತಿಸಲಾಗಿದೆ.

ಜೂನ್ 27ರಂದು ರಾತ್ರಿ ಸುಮಾರು 9.10ಕ್ಕೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಸುಭಾಷ್ ನಗರದ ಪೆಟ್ರೋಲ್ ಪಂಪ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿಯಲ್ಲಿ ದೃಶ್ಯ ಸೆರೆಯಾಗಿತ್ತು.
4,711 ರೂ.ಗೆ ಡೀಸೆಲ್ ತುಂಬಿದ ಬಳಿಕ ಸಿಬ್ಬಂದಿ ಕ್ಯೂಆರ್ ಕೋಡ್ ತೋರಿಸಿದ್ದಾನೆ. ಆರೋಪಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಂತೆ ನಾಟಕವಾಡಿ, ಬಿಲ್ ನೀಡುವಂತೆ ಕೇಳಿದ್ದಾರೆ. ಸಿಬ್ಬಂದಿ ಬಿಲ್ ಕೊಡುವಷ್ಟರಲ್ಲಿ ಹಣ ಪಾವತಿಸದೇ ಪರಾರಿಯಾಗಿದ್ರು.
ತಾಂತ್ರಿಕ ಮಾಹಿತಿ, ಕಾರ್ ನಂಬರ್ ಆಧರಿಸಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ, ಶಿರ್ವ ಪಿಎಸ್ಐ ಮಂಜುನಾಥ ಮರಬಾಡ, ಪಿಎಸ್ಐ ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ್ ಮತ್ತು ದಾರಿಯಪ್ಪ ತಂಡ ಬೆಂಗಳೂರಿನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.
ಪ್ರಕರಣಕ್ಕೆ ಬಳಸಲಾಗಿದ್ದ ಫೋರ್ಡ್ ಎಕೋಸ್ಪೋರ್ಟ್ ಕಾರನ್ನು ವಶಕ್ಕೆ ಪಡೆದಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm