ಬ್ರೇಕಿಂಗ್ ನ್ಯೂಸ್
03-07-26 12:25 pm HK News Staffer ಕ್ರೈಂ
ಮಂಗಳೂರು, ಜುಲೈ 3: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆಯಲು ಯತ್ನಿಸಿದ ಖದೀಮನನ್ನು ಜೈಲಿನ ಭದ್ರತಾ ವಿಭಾಗದ ಕೆಎಸ್ಐಎಸ್ಎಫ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯಿಂದ ಗಾಂಜಾ, ಲೈಟರ್ ಹಾಗೂ ಗಾಂಜಾ ಸೇದುವ ಪೇಪರ್ಗಳನ್ನು ವಶಪಡಿಸಲಾಗಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಕೊಳತ್ತಮಜಲು ಕೋಳಕೇರಿ ಮೂಲದ, ಪ್ರಸ್ತುತ ಉರ್ವದಲ್ಲಿ ವಾಸವಿರುವ ತಿಲಕ್ರಾಜ್ ಬಂಧಿತ ಆರೋಪಿ. ಈ ಕೃತ್ಯದ ಹಿಂದೆ ಮೂಡುಶೆಡ್ಡೆ ನಿವಾಸಿ ಕಿರಣ್ ಹಾಗೂ ಸದ್ಯ ಕಾರಾಗೃಹದಲ್ಲಿ ಬಂಧಿಯಾಗಿರುವ ಕೈದಿ ಲಾಯ್ ವೇಗಸ್ ಕೈವಾಡ ಇರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ಬೆಳಕಿಗೆ ಬಂದಿದೆ.
ಜುಲೈ 2ರಂದು ಮುಂಜಾನೆ 4:20ರ ಸುಮಾರಿಗೆ ಆರೋಪಿ ತಿಲಕ್ರಾಜ್ ಜೈಲಿನ ಕಾಂಪೌಂಡ್ ಗೋಡೆಯ ಹೊರಗೆ ಸಂಶಯಾಸ್ಪದವಾಗಿ ಓಡಾಡುತ್ತಾ, ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಪೊಟ್ಟಣವೊಂದನ್ನು ಎಸೆದಿದ್ದ. ಈ ಘಟನೆಯನ್ನು ಅಲ್ಲಿ ಕಾವಲು ನಿಂತಿದ್ದ ಕೆಎಸ್ಐಎಸ್ಎಫ್ ಆರ್ಪಿಸಿ ಕಿರಣ್ ತಕ್ಷಣವೇ ಗಮನಿಸಿದ್ದಾರೆ. ಕೂಡಲೇ ಅವರು ಎಎಸ್ಐ ಕಿರಣ್ ಅಂಬಿಗ ಅವರಿಗೆ ಅಲರ್ಟ್ ಸಂದೇಶ ರವಾನಿಸಿದ್ದಾರೆ. ಜೈಲು ಸಿಬ್ಬಂದಿ ತನ್ನನ್ನು ಹಿಡಿಯಲು ಬರುತ್ತಿರುವುದನ್ನು ಕಂಡ ಆರೋಪಿ ತಿಲಕ್ರಾಜ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅಷ್ಟಕ್ಕೇ ಬಿಡದ ಸಿಬ್ಬಂದಿ ಸುಮಾರು 500 ಮೀಟರ್ನಷ್ಟು ದೂರ ಆತನನ್ನು ಬೆನ್ನಟ್ಟಿಕೊಂಡು ಹೋಗಿ ಬಂಧಿಸಿದ್ದಾರೆ.
ಬಳಿಕ ಕೆಎಸ್ಐಎಸ್ಎಫ್ ಸೂಚನೆಯಂತೆ ಬರ್ಕೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಜೈಲಿನೊಳಗೆ ಗಾಂಜಾ, ಡ್ರಗ್ಸ್ ತೂರುವ ಜಾಲ ಬಯಲಾಗಿದೆ. ಮೂಡುಶೆಡ್ಡೆ ನಿವಾಸಿ ಕಿರಣ್ ಎಂಬಾತ ತನಗೆ ಗಾಂಜಾ, ಲೈಟರ್ ಹಾಗೂ ರೋಲಿಂಗ್ ಪೇಪರ್ ನೀಡಿ, ಜೈಲಿನಲ್ಲಿರುವ ಲಾಯ್ ವೇಗಸ್ ಎಂಬಾತನ ಮೊಬೈಲ್ ನಂಬರ್ ಕೊಟ್ಟಿದ್ದ ಎಂದು ತಿಲಕ್ರಾಜ್ ಬಾಯಿಬಿಟ್ಟಿದ್ದಾನೆ. ಈ ಕೆಲಸಕ್ಕಾಗಿ ತನಗೆ ₹2,000 ಅಡ್ವಾನ್ಸ್ ನೀಡಲಾಗಿತ್ತು. ಜೈಲಿನೊಳಗಿದ್ದ ಕೈದಿ ಲಾಯ್ ವೇಗಸ್ ಫೋನ್ ಮಾಡಿ ಕರೆಕ್ಟಾಗಿ ಅಡುಗೆ ಮನೆ ಇರುವ ಜಾಗಕ್ಕೆ ಎಸೆಯುವಂತೆ ಹೇಳಿದ್ದ ಎಂದು ಆರೋಪಿ ತಿಳಿಸಿದ್ದಾನೆಂದು ವಿಚಾರಣೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸರು ಆರೋಪಿಗಳಾದ ತಿಲಕ್ರಾಜ್ ಮತ್ತು ಲಾಯ್ ವೇಗಸ್ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಹಾಗೂ ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ-2022ರ ಸೆಕ್ಷನ್ 42ರ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm