ಬ್ರೇಕಿಂಗ್ ನ್ಯೂಸ್
03-07-26 04:22 pm HK News Staffer ಕ್ರೈಂ
ಕಾಸರಗೋಡು, ಜುಲೈ 3: ಇನ್ಸ್ಟಾ ಗ್ರಾಮ್ ಜಾಲತಾಣದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಫಾಲೊವರ್ಸ್ ಹೊಂದಿರುವ ಸ್ಟಾರ್ ಇನ್ ಫ್ಲುಯೆನ್ಸರ್ ಧನ್ಯಾ ಎಸ್.ಆರ್ ಅಲಿಯಾಸ್ ‘ಸ್ಪಾರ್ಟಾದ ಹೆಲೆನ್’ (28) ವಿರುದ್ಧ ಮದ್ಯದ ಅಮಲಿನಲ್ಲಿ ಅಪಾಯಕಾರಿಯಾಗಿ ಕಾರು ಚಲಾಯಿಸಿದ ಆರೋಪದಲ್ಲಿ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾದ ವೇಳೆ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು ಕಾರನ್ನು ಬಳಿಕ ಬರೋಬ್ಬರಿ 17 ಕಿಲೋಮೀಟರ್ ಬೆನ್ನಟ್ಟಿ ಹಿಡಿದಿದ್ದಾರೆ.
ಜುಲೈ 1ರ ನಸುಕಿನ ಜಾವ 2 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಬಂದಿಯೋಡು ಎಂಬಲ್ಲಿ ಹೈಡ್ರಾಮಾ ನಡೆದಿದ್ದು, ಧನ್ಯಾ ಚಲಾಯಿಸುತ್ತಿದ್ದ ಟಾಟಾ ಪಂಚ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್ ನೇತೃತ್ವದ ಗಸ್ತು ತಂಡವು ವಿದ್ಯಾನಗರ ಠಾಣೆಯ ಕಡೆಯಿಂದ ಕುಂಬಳೆಗೆ ಬರುತ್ತಿದ್ದಾಗ, ಅಣಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಟಾಟಾ ಪಂಚ್ ಕಾರು ನಿಂತಿರುವುದನ್ನು ಗಮನಿಸಿದ್ದಾರೆ. ಪೊಲೀಸರು ವಾಹನವನ್ನು ಪರಿಶೀಲಿಸಲು ಹತ್ತಿರ ಬರುತ್ತಿದ್ದಂತೆ, ಚಾಲಕನ ಸೀಟಿನಲ್ಲಿದ್ದ ಧನ್ಯಾ ಪೊಲೀಸರ ಸೂಚನೆಗಳನ್ನು ನಿರ್ಲಕ್ಷಿಸಿ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಅನುಮಾನಗೊಂಡ ಪೊಲೀಸರು ಜೀಪ್ನಲ್ಲಿ ಕಾರನ್ನು ಬೆನ್ನಟ್ಟಿದ್ದು, ಮಂಗಲ್ಪಾಡಿ ಭಗವತಿ ನಗರದ ಬಳಿ 17 ಕಿ.ಮೀ ದೂರದ ವರೆಗೆ ಚೇಸ್ ಮಾಡಿ ಕಾರನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ, ಕಾರು ಚಾಲಕಿ ಧನ್ಯಾ ಅವರ ಉಸಿರಾಟದಲ್ಲಿ ಮದ್ಯದ ವಾಸನೆ ಬಂದಿದೆ. ತಕ್ಷಣವೇ ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ತೋರಿಸಿದೆ. ಮೋಟಾರು ವಾಹನ ಕಾಯ್ದೆಯಡಿ ನಿಗದಿಪಡಿಸಿದ ಮಿತಿಗಿಂತ (100 ಮಿಲಿಗೆ 30 ಮಿಗ್ರಾಂ) ಎರಡು ಪಟ್ಟು ಹೆಚ್ಚು ಇರುವುದು ದೃಢಪಟ್ಟಿದ್ದರಿಂದ ಕೇಸು ದಾಖಲಿಸಿದ್ದಾರೆ. ಕಾರಿನಲ್ಲಿ ಧನ್ಯಾ ಅವರೊಂದಿಗೆ ಪತಿ ರಾಜೇಶ್ ಕೆ.ಆರ್. ಕೂಡ ಪ್ರಯಾಣಿಸುತ್ತಿದ್ದರು. ಧನ್ಯಾ ವಿರುದ್ಧ ಬಿಎನ್ಎಸ್ ಸೆಕ್ಷನ್ 281 (ಅತಿವೇಗದ ಚಾಲನೆ) ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 132(1), 179 ಮತ್ತು 185 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧನ್ಯಾ, ಮದ್ಯ ಸೇವಿಸಿ ವಾಹನ ಚಲಾಯಿಸಿದ್ದು ನಿಜ. ಪೊಲೀಸರನ್ನು ನೋಡಿ ಗೊಂದಲಕ್ಕೀಡಾಗಿ ಕಾರು ಚಲಾಯಿಸಿದೆ ಅಷ್ಟೇ. ಪೊಲೀಸರು ಸಭ್ಯ ರೀತಿಯಲ್ಲೇ ನಡೆದುಕೊಂಡಿದ್ದಾರೆ. ಆದರೆ ಕೆಲವು ಮಾಧ್ಯಮಗಳು ನಾನು ಎಂಡಿಎಂಎ ಡ್ರಗ್ಸ್ ತಗೊಂಡಿದ್ದೆ ಅಂತ ಸುಳ್ಳು ವರದಿ ಮಾಡ್ತಿವೆ. ಇದಕ್ಕಾಗಿಯೇ ನಾನು ಮಿಮ್ಸ್ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಪರೀಕ್ಷೆ ನೀಡಿದ್ದು, ರಿಪೋರ್ಟ್ ಬಂದ ತಕ್ಷಣ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತೀನಿ” ಎಂದು ಹೇಳಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm