ಬ್ರೇಕಿಂಗ್ ನ್ಯೂಸ್
03-07-26 06:59 pm HK News Staffer ಕ್ರೈಂ
ಹಾಸನ, ಜುಲೈ 3: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಹಾಸನದಾನದಲ್ಲಿ ಬಂದಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು, ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಕೆರೆಹಳ್ಳಿಯನ್ನ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಮುಸ್ಲಿಂ ಧರ್ಮಗುರುಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಮಾಜಿಕ ಹೋರಾಟಗಾರ ಅಬ್ದುಲ್ ರಜಾಕ್ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ, ಹಾಸನದ ಕೆರೆಹಳ್ಳಿ ಗ್ರಾಮದಲ್ಲಿರುವ ಪುನೀತ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ.
ಬಂಧನದ ವೇಳೆ ಸರ್ಕಾರದ ವಿರುದ್ಧ ಕಿಡಿ ;
ಬಂಧನದ ವೇಳೆ ಮಾತನಾಡಿದ ಪುನೀತ್ ಕೆರೆಹಳ್ಳಿ, ತಮ್ಮ ವಿರುದ್ಧ ರಾಜಕೀಯ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು. "ನನಗೆ ಜೀವ ಬೆದರಿಕೆ ಇದೆ. ಅಬ್ದುಲ್ ರಜಾಕ್ ವಿರುದ್ಧ ನಾನು ಮೊದಲೇ ದೂರು ನೀಡಿದ್ದೇನೆ. ಅವನನ್ನು ಬಂಧಿಸದೇ ನನ್ನನ್ನೇ ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ," ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಅವರ ತಾಯಿ ಭಾವುಕರಾಗಿ ಕಣ್ಣೀರಿಟ್ಟ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
ಸದ್ಯ ಪ್ರಕರಣದ ತನಿಖೆಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಮುಂದುವರಿಸಿದ್ದು, ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳ ಪರಿಶೀಲನೆ ನಡೆಯುತ್ತಿದೆ.




ಈ ಹಿಂದೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆಗೆ ಸಂಬಂಧಿಸಿದಂತೆ ಇದೇ ಪುನೀತ್ ಹಾಗೂ ಅವರ ಬಂಬಲಿಗ ಗೋಪಿ ವಿರುದ್ಧ ಕೋಲಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿದಂತೆ ಹೈಕೋರ್ಟ್ ತಡೆ ನೀಡಿ ಆದೇಶಿಸಿತ್ತು. ಇದಕ್ಕೂ ಮುನ್ನ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಅವರು ಹೈಕೋರ್ಟ್ಗೆ ಮನವಿ ಮಾಡಿಕೊಂಡಿದ್ದರು.
ಎಸ್ಎಸ್ಆರ್ ಬಡಾವಣೆಯಲ್ಲಿ ಮಾಂಸದಂಗಡಿ ಮಾಲೀಕನಿಗೆ ಪುನೀತ್ ಮತ್ತವರ ಗುಂಪು ಬೈದು ತೊಂದರೆ ಕೊಡುತ್ತಿತ್ತು. ಅದನ್ನು ನಾನು ಪ್ರಶ್ನಿಸಿದರೆ ನೀನ್ಯಾರು? ಎಂದು ನನ್ನನ್ನು ದಬಾಯಿಸಿದ್ದರು. ಆಗ ನಾನು ದಲಿತ ಸಂಘಟನೆಯ ಮುಖಂಡ ಎಂದು ಹೇಳಿದ್ದಾಗಿ ದೂರಿನಲ್ಲಿ ಎಂ.ವಿ.ನಾಗರಾಜ್ ಅವರು ತಿಳಿಸಿದ್ದಾರೆ. ಅಲ್ಲದೇ ನನ್ನ ಜಾತಿ ಹೆಸರು ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ನಂತರ ವಾದ ವಿವಾದ ಆಲಿಸಿದ ಕೋರ್ಟ್ ಈ ಪ್ರಕರಣದಲ್ಲಿ ಎಫ್ಐಆರ್ ಆಗದಂತೆ ತಡೆ ನೀಡಿತ್ತು.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm