ಬ್ರೇಕಿಂಗ್ ನ್ಯೂಸ್
04-07-26 05:58 pm HK News Staffer ಕ್ರೈಂ
ಮಂಗಳೂರು, ಜುಲೈ 4: 'ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ವಹಿವಾಟಿಗೆಬ ನೆರವಾಗಲು ಅಮಾಯಕರನ್ನು ನಂಬಿಸಿ ಕಮಿಷನ್ ಮೇರೆಗೆ ಬ್ಯಾಂಕ್ ಖಾತೆಗಳನ್ನು ಮಾಡಿಸಿಕೊಡುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಸೈಬರ್ ವಂಚಕ.
ಜುಲೈ 3ರಂದು ಆರೋಪಿಯನ್ನು ಬಂಧಿಸಿದ ಸೈಬರ್ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ‘ಡಿಜಿಟಲ್ ಅರೆಸ್ಟ್’ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈತನ ಕತರ್ನಾಕ್ ಪ್ಲಾನ್ ತಿಳಿದುಬಂದಿತ್ತು. ಮುಗ್ಧ ಸಾರ್ವಜನಿಕರಿಗೆ ಆಮಿಷ ಒಡ್ಡಿ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಸುತ್ತಿದ್ದ. ಬಳಿಕ ಈ ಖಾತೆಗಳನ್ನು ಸೈಬರ್ ವಂಚಕರಿಗೆ ನೀಡಿ, ಅದರ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ಹಣದಹ ವಹಿವಾಟು ನಡೆಸಲು ಪರೋಕ್ಷವಾಗಿ ಸಹಕರಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಈತನ ವಿರುದ್ಧ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 4 ಗಂಭೀರ ಪ್ರಕರಣಗಳು ದಾಖಲಾಗಿವೆ. ವಾರಂಟ್ ಜಾರಿಯಾಗಿದ್ದರೂ ಪೊಲೀಸರ ಕೈಗೆ ಸಿಗದೆ ಈತ ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ. ಇದೀಗ ಸೈಬರ್ ಸೆಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಜುಬೈರ್ ನನ್ನು ಜೈಲಿಗಟ್ಟಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm