ಬ್ರೇಕಿಂಗ್ ನ್ಯೂಸ್
04-07-26 06:54 pm HK News Staffer ಕ್ರೈಂ
ಉಡುಪಿ, ಜುಲೈ 4: ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ಉದ್ಯಮಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಪಡುಬಿದ್ರೆಯ ಮಹಿಳೆಯೊಬ್ಬಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರೆ ಕಂಚಿನಡ್ಕ ಮಸೀದಿ ಸಮೀಪದ ನಿವಾಸಿ ಝೀನತ್ ಇಬ್ರಾಹೀಂ ಬಂಧಿತ ಆರೋಪಿ. ಉಡುಪಿ ಮೂಲದ ರಿಯಲ್ ಎಸ್ಟೆಟ್ ವ್ಯವಹಾರ ಮಾಡಿಕೊಂಡಿದ್ದ ಉದ್ಯಮಿಗೆ ಝೀನತ್ ಪರಿಚಯವಾಗಿದ್ದು, ಬಳಿಕ ಅವರಿಬ್ಬರು ಸೇರಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಪ್ರಾರಂಭಿಸಿದ್ದರು. ಆ ವ್ಯಕ್ತಿ ಝೀನತ್ ಮಾತುಗಳನ್ನು ನಂಬಿ ಹೂಡಿಕೆ ಮಾಡುವ ಉದ್ದೇಶದಿಂದ 70 ಲಕ್ಷ ರೂ. ಆಕೆಗೆ ನೀಡಿದ್ದರು. ಈ ಹಣವನ್ನು ಝೀನತ್ ಜಮೀನು ಖರೀದಿಗೆ ಬಳಸದೇ ತನ್ನ ಸ್ವಂತ ಉದ್ದೇಶಗಳಿಗಾಗಿ ಬಳಸಿಕೊಂಡು ಮೋಸ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಬಳಿಕ ತನ್ನ ಕಚೇರಿಯನ್ನು ಮುಚ್ಚುವ ಸಂದರ್ಭದಲ್ಲಿ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಮತ್ತು ಪೆನ್ ಡ್ರೈವ್ ಸಿಕ್ಕಿದ್ದು, ಅದರಲ್ಲಿ ಹಲವಾರು ಪ್ರಭಾವಿ ಗಣ್ಯ ವ್ಯಕ್ತಿಗಳ ಖಾಸಗಿ ಮತ್ತು ಅಶ್ಲೀಲ ಛಾಯಾಚಿತ್ರಗಳು ಹಾಗೂ ವಿಡಿಯೋಗಳು ಇರುವುದು ಕಂಡುಬಂದಿತ್ತು.
ಉದ್ಯಮಿ 70 ಲಕ್ಷ ರೂ. ವಾಪಸ್ ನೀಡುವಂತೆ ಝೀನತ್ ಳಲ್ಲಿ ಕೇಳಿದಾಗ, ಆಕೆ ಉದ್ಯಮಿಯ ಹೊಸ ಕಚೇರಿಗೆ ಬಂದು, ಮತ್ತಷ್ಟು ಹಣಕ್ಕೆ ಬೇಡಿಕೆ ಇಡಲು ಪ್ರಾರಂಭಿಸಿದಳು. ಹಣ ನೀಡದಿದ್ದರೆ ಉದ್ಯಮಿ ವಿರುದ್ದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಳು. ಝೀನತ್ ತನ್ನ ಬಳಿ ಉದ್ಯಮಿಯ ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದಲ್ಲದೆ, ಅವರ ಪತ್ನಿ ಮಕ್ಕಳನ್ನು ಅಪಹರಿಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ದೂರಲಾಗಿದೆ.
ಸಬೀನಾ ಇಲ್ಯಾಸ್ ಹಾಗೂ ಇತರರು ಝೀನತ್ ಳೊಂದಿಗೆ ಸೇರಿ ಬ್ಲ್ಯಾಕ್ ಮೇಲ್ ಮಾಡಿ ಅಕ್ರಮವಾಗಿ ಹಣ ವಸೂಲಿ ಮಾಡಿ ವಂಚನೆಯ ಜಾಲವನ್ನು ನಡೆಸುತ್ತಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿ ದೂರು ನೀಡಿದ್ದಾರೆ.
ನಗರ ಠಾಣೆಯ ಎಸ್ಐ ಭರತೇಶ್ ಕಂಕಣವಾಡಿ ನೇತೃತ್ವದ ತಂಡವು ಝೀನತ್ ಳನ್ನು ಪಡುಬಿದ್ರೆಯ ಕಂಚಿನಡ್ಕ ಎಂಬಲ್ಲಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಐದು ದಿನಗಳ ಕಸ್ಟಡಿಗೆ ಪಡೆಯಲಾಗಿದೆ. ಇದೇ ರೀತಿ ಆರೋಪಿ ಝೀನತ್ ಳಿಂದ ಯಾರಿಗಾದರೂ ಮೋಸ ಮತ್ತು ವಂಚನೆ ಆಗಿದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm