ಬ್ರೇಕಿಂಗ್ ನ್ಯೂಸ್
06-07-26 11:59 am HK News Staffer ಕ್ರೈಂ
ಮಂಗಳೂರು, ಜುಲೈ 6: ಕಾಲೇಜು ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಇರಾ ಸಮೀಪದ ಮೋಂತಿಮಾರು ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಸ್ಥಳೀಯ ನಿವಾಸಿ ಜವ್ವರ್ (28) ಎಂಬಾತ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಪ್ರೀತಿ ವಿಚಾರದಲ್ಲಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.



ಇಬ್ಬರು ಕೂಡ ಇರಾ ಬಳಿಯ ಮೋಂತಿಮಾರ್ ಪಡ್ಪು ನಿವಾಸಿಗಳಾಗಿದ್ದು ಪ್ರೀತಿ ನೆಪದಲ್ಲಿ ಯುವಕ ಜವ್ವಾರ್ ಯುವತಿಯ ಹಿಂದೆ ಬಿದ್ದಿದ್ದ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಇಂದು ಬೆಳಗ್ಗೆ ಹಿಂಬಾಲಿಸುತ್ತಾ ಬಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲಿದ್ದ ಸ್ಥಳೀಯರು ಬೊಬ್ಬೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಆಕೆಯನ್ನು ಬಳಿಕ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚೂರಿ ಇರಿತದಿಂದ ತೀವ್ರ ರಕ್ತ ಸ್ರಾವವಾಗಿದ್ದು ಬಸ್ ನಿಲ್ದಾಣದಲ್ಲಿ ರಕ್ತ ಚೆಲ್ಲಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ಇದೆ. ಆರೋಪಿ ಜವ್ಬಾರ್ ಅದೇ ಬಸ್ ನಿಲ್ದಾಣ ಬಳಿಯಲ್ಲಿ ದಿನಸಿ ಅಂಗಡಿ ಸಡೆಸುತ್ತಿದ್ದ. ಏಕಾಏಕಿ ಚೂರಿಯಿಂದ ಹಲ್ಲೆ ನಡೆಸಿದ್ದು ವಿದ್ಯಾರ್ಥಿನಿ ಬೊಬ್ಬೆ ಹಾಕಿ ಆತನ ಕೈಯಿಂದ ಪಾರಾಗಿದ್ದಾಳೆ.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 12:28 pm
HK News Staffer
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm