ಬ್ರೇಕಿಂಗ್ ನ್ಯೂಸ್
06-07-26 11:59 am HK News Staffer ಕ್ರೈಂ
ಮಂಗಳೂರು, ಜುಲೈ 6: ಕಾಲೇಜು ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಇರಾ ಸಮೀಪದ ಮೋಂತಿಮಾರು ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಸ್ಥಳೀಯ ನಿವಾಸಿ ಜವ್ವರ್ (28) ಎಂಬಾತ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಪ್ರೀತಿ ವಿಚಾರದಲ್ಲಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.



ಇಬ್ಬರು ಕೂಡ ಇರಾ ಬಳಿಯ ಮೋಂತಿಮಾರ್ ಪಡ್ಪು ನಿವಾಸಿಗಳಾಗಿದ್ದು ಪ್ರೀತಿ ನೆಪದಲ್ಲಿ ಯುವಕ ಜವ್ವಾರ್ ಯುವತಿಯ ಹಿಂದೆ ಬಿದ್ದಿದ್ದ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಇಂದು ಬೆಳಗ್ಗೆ ಹಿಂಬಾಲಿಸುತ್ತಾ ಬಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲಿದ್ದ ಸ್ಥಳೀಯರು ಬೊಬ್ಬೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಆಕೆಯನ್ನು ಬಳಿಕ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚೂರಿ ಇರಿತದಿಂದ ತೀವ್ರ ರಕ್ತ ಸ್ರಾವವಾಗಿದ್ದು ಬಸ್ ನಿಲ್ದಾಣದಲ್ಲಿ ರಕ್ತ ಚೆಲ್ಲಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ಇದೆ. ಆರೋಪಿ ಜವ್ಬಾರ್ ಅದೇ ಬಸ್ ನಿಲ್ದಾಣ ಬಳಿಯಲ್ಲಿ ದಿನಸಿ ಅಂಗಡಿ ಸಡೆಸುತ್ತಿದ್ದ. ಏಕಾಏಕಿ ಚೂರಿಯಿಂದ ಹಲ್ಲೆ ನಡೆಸಿದ್ದು ವಿದ್ಯಾರ್ಥಿನಿ ಬೊಬ್ಬೆ ಹಾಕಿ ಆತನ ಕೈಯಿಂದ ಪಾರಾಗಿದ್ದಾಳೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm