ಬ್ರೇಕಿಂಗ್ ನ್ಯೂಸ್
09-07-26 05:34 pm HK News Staffer ಕ್ರೈಂ
ಮಂಗಳೂರು, ಜುಲೈ 9: ಬೆಂಗಳೂರಿನ ಹೊಸಕೋಟೆಯಲ್ಲಿರುವ ಬಹುರಾಷ್ಟ್ರೀಯ ಉತ್ಪಾದನಾ ಸಂಸ್ಥೆಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಗಳೂರಿನ 28 ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರ ಯುವಕನಿಗೆ ವಂಚಕರು ಬರೋಬ್ಬರಿ ₹2.90 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೇವಲ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತನನ್ನು ಹಂತ ಹಂತವಾಗಿ ನಂಬಿಸಿ, ಬಲೆಯಲ್ಲಿ ಸಿಲುಕಿಸಿ ಹಣ ಪೀಕಿಸಿಕೊಂಡಿದ್ದಾರೆ. ಕಳೆದ ಮೇ 27ರಂದು 'ಪ್ರವೀಣ್' ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ತಾನು ಜಾಬ್ ಏಜೆನ್ಸಿಯ ಪ್ರತಿನಿಧಿ ಎಂದು ಹೇಳಿಕೊಂಡಿದ್ದು, ಇಂಟರ್ವ್ಯೂ ಫೀಸ್ ಎಂದು ₹2,000 ಪಾವತಿಸಲು ತಿಳಿಸಿದ್ದಾನೆ. ಆನಂತರ, ಮೇ 29 ಮತ್ತು ಜೂನ್ 1 ರಂದು ಕರೆ ಮಾಡಿ ನಂಬಿಕೆ ಹುಟ್ಟಿಸಿದ್ದು ಸಂತ್ರಸ್ತನಿಗೆ ವಿಡಿಯೋ ಇಂಟರ್ವ್ಯೂ ಲಿಂಕ್ ಕಳುಹಿಸಿ, ನೈಜ ಎನ್ನುವಂತೆ ಸಂದರ್ಶನ ನಡೆಸಿದ್ದಾರೆ. ಜೂನ್ 1 ರಂದು ನೀವು ಕೆಲಸಕ್ಕೆ ಆಯ್ಕೆಯಾಗಿದ್ದೀರಿ ಎಂದು ಹೇಳಿ ನಂಬಿಸಿದ್ದಾರೆ.
ಆಬಳಿಕ ಕೆಲಸ ಸಿಕ್ಕ ಖುಷಿಯಲ್ಲಿದ್ದ ಯುವಕನಿಂದ ಪ್ರೊಸೆಸಿಂಗ್ ಫೀಸ್ ಹೆಸರಲ್ಲಿ ₹20,000, ಗೇಟ್ ಪಾಸ್ ಶುಲ್ಕದ ಹೆಸರಲ್ಲಿ ₹27,600, ಮತ್ತು ವೈದ್ಯಕೀಯ ತಪಾಸಣೆ ಹೆಸರಿನಲ್ಲಿ ₹40,000 ದೋಚಿದ್ದಾರೆ. ಇದಾದ ಮೇಲೂ ಬೇರೆ ಬೇರೆ ಕಾರಣ ನೀಡಿ ಹಣ ಪೀಕಿಸುತ್ತಲೇ ಇದ್ದರು. ಇವರು ಪದೇ ಪದೇ ಹಣ ಕೇಳುತ್ತಿದ್ದರಿಂದ ಜೂನ್ 27ರಂದು ಅನುಮಾನಗೊಂಡ ಯುವಕ, ನಿಮ್ಮ ಒಟ್ಟು ಪ್ರಕ್ರಿಯೆಯನ್ನು ರದ್ದುಗೊಳಿಸಲು ಕೇಳಿಕೊಂಡಿದ್ದಾನೆ. ಅಷ್ಟರಲ್ಲಿ ವಂಚಕರು ಮತ್ತೊಂದು ಪ್ಲಾನ್ ಮಾಡಿದ್ದಾರೆ. ಕಟ್ಟಿರುವ ಎಲ್ಲಾ ಹಣ ರಿಫಂಡ್ ಆಗಬೇಕಾದರೆ ₹15,579 ಕ್ಯಾನ್ಸಲೇಶನ್ ಫೀಸ್ ಕಟ್ಟಬೇಕು ಎಂದು ಹೇಳಿ ಆ ಹಣವನ್ನೂ ಪಡೆದು ಸಂಪರ್ಕ ಕಡಿತಗೊಳಿಸಿದ್ದಾರೆ.
ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ಇಂಜಿನಿಯರ್ ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಹೆಲ್ಪ್ ಲೈನ್ಗೆ ದೂರು ನೀಡಿದ್ದಾರೆ. ಬಳಿಕ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm