ಬ್ರೇಕಿಂಗ್ ನ್ಯೂಸ್
09-07-26 09:11 pm HK News Staffer ಕ್ರೈಂ
ಬೆಂಗಳೂರು, ಜುಲೈ 09: ಶಾಲೆಯಲ್ಲಿ ನಡೆದ ಘಟನೆಯಿಂದ ನೊಂದ ಅಪ್ರಾಪ್ತ ಬಾಲಕಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮರಸೂರು ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರ ಶಾಲೆಗೆ ಗೈರಾಗಿದ್ದ ವಿದ್ಯಾರ್ಥಿನಿ, ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆಗೂ ಮುನ್ನ ಎರಡು ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಮರಸೂರು ಸರ್ಕಾರಿ ಪ್ರೌಢಶಾಲಾ ಶಿಕ್ಷಕಿಯೊಬ್ಬರಿಗೆ ಅಡ್ಡ ಹೆಸರು ಇಟ್ಟ ವಿಚಾರವಾಗಿ ವಿದ್ಯಾರ್ಥಿನಿಗೆ ಮಂಗಳವಾರ ಶಿಕ್ಷಕಿ ಬುದ್ಧಿ ಹೇಳಿದ್ದರಂತೆ. ಇದರಿಂದ ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು ಅದರಲ್ಲಿ, ‘ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ವಿದ್ಯಾರ್ಥಿನಿ ಬರೆದಿದ್ದಾಳೆ.
‘ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಪೋಷಕರು ಆಗಮಿಸಿ, ಆಕ್ರೋಶ ಹೊರಹಾಕಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm