ಬ್ರೇಕಿಂಗ್ ನ್ಯೂಸ್
09-07-26 09:11 pm HK News Staffer ಕ್ರೈಂ
ಬೆಂಗಳೂರು, ಜುಲೈ 09: ಶಾಲೆಯಲ್ಲಿ ನಡೆದ ಘಟನೆಯಿಂದ ನೊಂದ ಅಪ್ರಾಪ್ತ ಬಾಲಕಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮರಸೂರು ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರ ಶಾಲೆಗೆ ಗೈರಾಗಿದ್ದ ವಿದ್ಯಾರ್ಥಿನಿ, ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆಗೂ ಮುನ್ನ ಎರಡು ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಮರಸೂರು ಸರ್ಕಾರಿ ಪ್ರೌಢಶಾಲಾ ಶಿಕ್ಷಕಿಯೊಬ್ಬರಿಗೆ ಅಡ್ಡ ಹೆಸರು ಇಟ್ಟ ವಿಚಾರವಾಗಿ ವಿದ್ಯಾರ್ಥಿನಿಗೆ ಮಂಗಳವಾರ ಶಿಕ್ಷಕಿ ಬುದ್ಧಿ ಹೇಳಿದ್ದರಂತೆ. ಇದರಿಂದ ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು ಅದರಲ್ಲಿ, ‘ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ವಿದ್ಯಾರ್ಥಿನಿ ಬರೆದಿದ್ದಾಳೆ.
‘ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಪೋಷಕರು ಆಗಮಿಸಿ, ಆಕ್ರೋಶ ಹೊರಹಾಕಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am