ಬ್ರೇಕಿಂಗ್ ನ್ಯೂಸ್
10-07-26 02:22 pm HK News Staffer ಕ್ರೈಂ
ಮಂಗಳೂರು, ಜುಲೈ 10: ದೇಶಾದ್ಯಂತ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್) ಮೂಲಕ ಬಾಂಗ್ಲಾದೇಶಿಗರ ಪತ್ತೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದೇ ವೇಳೆ, ಮತದಾರ ಪಟ್ಟಿ ಸೇರದೆ ಕಾರ್ಮಿಕರ ಸೋಗಿನಲ್ಲಿ ಬಂದು ಆಧಾರ್ ಮಾಡಿಸಿ ನೆಲೆ ಕಂಡುಕೊಳ್ಳುತ್ತಿರುವ ಬಾಂಗ್ಲಾ ಮೂಲದ ನಿವಾಸಿಗಳ ಪತ್ತೆಗಾಗಿ ಮಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಮುಕ್ಕದಲ್ಲಿ ಕಟ್ಟಡ ಕಾಮಗಾರಿಗೆಂದು ಬಂದು ನೆಲೆ ಕಂಡುಕೊಂಡಿದ್ದ ಎಂಟು ಮಂದಿ ಬಾಂಗ್ಲಾದೇಶಿಗರನ್ನು ಸೆರೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮುಕ್ಕದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಗೆ ಬಂದಿದ್ದ ಕಾರ್ಮಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಬಾಂಗ್ಲಾ ಮೂಲದವರು ಅನ್ನುವುದು ಪತ್ತೆಯಾಗಿದೆ.
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿಕೊಂಡಿದ್ದಲ್ಲದೆ, ಸ್ಥಳೀಯ ಏಜಂಟರ ಮೂಲಕ ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಇವರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ, ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು ಭಾರತದ ಗಡಿಭಾಗ ಬಾಂಗ್ಲಾದ ರಾಜಶಾಹಿ ಎಂಬಲ್ಲಿನ ನಿವಾಸಿಗಳು ಎಂದು ತಿಳಿದುಬಂದಿದೆ.
ಬಾಂಗ್ಲಾದಿಂದ ಅಕ್ರಮವಾಗಿ ಭಾರತದ ಗಡಿಯಿಂದ ನುಸುಳಿಕೊಂಡು ಪಶ್ವಿಮ ಬಂಗಾಳದ ಮೂಲಕ ಕರ್ನಾಟಕಕ್ಕೆ ಕೂಲಿ ಕಾರ್ಮಿಕರಾಗಿ ಬಂದಿದ್ದು ಇಲ್ಲಿ ಸ್ಥಳೀಯ ಏಜಂಟರ ಮೂಲಕ ಆಧಾರ್ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ. ಇವರ ಬಗ್ಗೆ ವಿದೇಶಿಗರ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದ್ದು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am