ಬ್ರೇಕಿಂಗ್ ನ್ಯೂಸ್
10-07-26 02:22 pm HK News Staffer ಕ್ರೈಂ
ಮಂಗಳೂರು, ಜುಲೈ 10: ದೇಶಾದ್ಯಂತ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್) ಮೂಲಕ ಬಾಂಗ್ಲಾದೇಶಿಗರ ಪತ್ತೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದೇ ವೇಳೆ, ಮತದಾರ ಪಟ್ಟಿ ಸೇರದೆ ಕಾರ್ಮಿಕರ ಸೋಗಿನಲ್ಲಿ ಬಂದು ಆಧಾರ್ ಮಾಡಿಸಿ ನೆಲೆ ಕಂಡುಕೊಳ್ಳುತ್ತಿರುವ ಬಾಂಗ್ಲಾ ಮೂಲದ ನಿವಾಸಿಗಳ ಪತ್ತೆಗಾಗಿ ಮಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಮುಕ್ಕದಲ್ಲಿ ಕಟ್ಟಡ ಕಾಮಗಾರಿಗೆಂದು ಬಂದು ನೆಲೆ ಕಂಡುಕೊಂಡಿದ್ದ ಎಂಟು ಮಂದಿ ಬಾಂಗ್ಲಾದೇಶಿಗರನ್ನು ಸೆರೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮುಕ್ಕದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಗೆ ಬಂದಿದ್ದ ಕಾರ್ಮಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಬಾಂಗ್ಲಾ ಮೂಲದವರು ಅನ್ನುವುದು ಪತ್ತೆಯಾಗಿದೆ.
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿಕೊಂಡಿದ್ದಲ್ಲದೆ, ಸ್ಥಳೀಯ ಏಜಂಟರ ಮೂಲಕ ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಇವರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ, ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು ಭಾರತದ ಗಡಿಭಾಗ ಬಾಂಗ್ಲಾದ ರಾಜಶಾಹಿ ಎಂಬಲ್ಲಿನ ನಿವಾಸಿಗಳು ಎಂದು ತಿಳಿದುಬಂದಿದೆ.
ಬಾಂಗ್ಲಾದಿಂದ ಅಕ್ರಮವಾಗಿ ಭಾರತದ ಗಡಿಯಿಂದ ನುಸುಳಿಕೊಂಡು ಪಶ್ವಿಮ ಬಂಗಾಳದ ಮೂಲಕ ಕರ್ನಾಟಕಕ್ಕೆ ಕೂಲಿ ಕಾರ್ಮಿಕರಾಗಿ ಬಂದಿದ್ದು ಇಲ್ಲಿ ಸ್ಥಳೀಯ ಏಜಂಟರ ಮೂಲಕ ಆಧಾರ್ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ. ಇವರ ಬಗ್ಗೆ ವಿದೇಶಿಗರ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದ್ದು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm