ಬ್ರೇಕಿಂಗ್ ನ್ಯೂಸ್
10-07-26 08:22 pm HK News Staffer ಕ್ರೈಂ
ಮುಂಬೈ, ಜು. 10: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಭಾರೀ ಲಾಭ ಸಿಗುತ್ತದೆ ಎಂದು ನಂಬಿಸಿ ಸುಮಾರು 10 ಲಕ್ಷ ರೂ. ವಂಚನೆ ಎಸಗಿದ ಆರೋಪದ ಮೇಲೆ ಉಡುಪಿ ಮೂಲದ ಮಹಿಳೆಯನ್ನು ಮುಂಬೈನ ಕಾಂದಿವಲಿ ಪಶ್ಚಿಮ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಕೊಳಲಗಿರಿ ಕುಕಿಕಟ್ಟೆ ನಿವಾಸಿ ದೀಪಿಕಾ ಮನೋಜ್ ಶೆಟ್ಟಿ ಎಂದು ಗುರುತಿಸಲಾಗಿದೆ. 60 ವರ್ಷದ ರಜನಿ ದಯಾನಂದ ಶೆಟ್ಟಿ ನೀಡಿದ ದೂರಿನ ಮೇರೆಗೆ ಪೊಲೀಸರು ಬಂಧನ ಕ್ರಮ ಕೈಗೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಸಂಬಂಧಿ ಹರೀಶ್ ಶೆಟ್ಟಿ ಅವರು ಷೇರು ದಲ್ಲಾಳಿ ಸಂಸ್ಥೆಯಾದ ನಿರ್ಮಲ್ ಬ್ಯಾಂಗ್ ಎಂಬ ಸ್ಟಾಕ್ ಬ್ರೋಕರ್ ಏಜನ್ಸಿ ಹೊಂದಿದ್ದರು. ಅಲ್ಲಿ ದೀಪಿಕಾ ಕೆಲಸ ಮಾಡುತ್ತಿದ್ದ ಕಾರಣ ರಜನಿಗೆ ಆಕೆಯ ಪರಿಚಯವಾಗಿತ್ತು. 2024ರ ಸೆಪ್ಟೆಂಬರ್ನಲ್ಲಿ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಭೇಟಿಯ ವೇಳೆ, ₹1 ಲಕ್ಷ ಹೂಡಿಕೆ ಮಾಡಿದರೆ ಮೂರು ತಿಂಗಳ ಬಳಿಕ ಪ್ರತಿ ತಿಂಗಳು ಶೇ.20ರಷ್ಟು (₹60,000) ಲಾಭ ದೊರೆಯುತ್ತದೆ ಎಂದು ದೀಪಿಕಾ ಭರವಸೆ ನೀಡಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆಕೆಯ ಮಾತು ನಂಬಿದ ರಜನಿ, 2024ರ ಅಕ್ಟೋಬರ್ನಿಂದ ಡಿಸೆಂಬರ್ವರೆಗೆ ತಮ್ಮ ಆಕ್ಸಿಸ್ ಬ್ಯಾಂಕ್ ಖಾತೆಯಿಂದ ಆರ್ಟಿಜಿಎಸ್ (RTGS) ಮೂಲಕ ಹಂತ ಹಂತವಾಗಿ ಒಟ್ಟು ₹9 ಲಕ್ಷವನ್ನು ದೀಪಿಕಾ ಅವರ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗೆ ವರ್ಗಾಯಿಸಿದರು. ಇದೇ ವೇಳೆ ರಜನಿಯ ಸಹೋದರ ಹರೀಶ್ ಶೆಟ್ಟಿಯವರು ತಮ್ಮ ಭಾರತ್ ಬ್ಯಾಂಕ್ ಖಾತೆಯಿಂದ ₹2 ಲಕ್ಷವನ್ನು ದೀಪಿಕಾ ಖಾತೆಗೆ ಜಮೆ ಮಾಡಿದ್ದರು.
ಹಣ ಪಡೆದ ಬಳಿಕ ದೀಪಿಕಾ ಭರವಸೆ ನೀಡಿದ ಲಾಭವನ್ನಾಗಲಿ, ಹೂಡಿಕೆ ಮಾಡಿದ ಮೂಲಧನವನ್ನಾಗಲಿ ಹಿಂದಿರುಗಿಸಲಿಲ್ಲ ಎಂದು ಆರೋಪಿಸಲಾಗಿದೆ. ನಿರಂತರವಾಗಿ ಹಣ ವಾಪಸ್ ಕೇಳಿದಾಗ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು ₹8,58,600 ಮೊತ್ತದ ಚೆಕ್ಗಳನ್ನು ನೀಡಿದ್ದಳು. ಆದರೆ ಖಾತೆಯಲ್ಲಿ ಹಣವಿಲ್ಲದ ಕಾರಣ ಎಲ್ಲಾ ಚೆಕ್ಗಳು ಬೌನ್ಸ್ ಆಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ದೀಪಿಕಾ ದೂರುದಾರರ ಸಂಪರ್ಕವನ್ನೇ ತಪ್ಪಿಸಲು ಆರಂಭಿಸಿದ್ದಳು. ತಾವು ವಂಚನೆಗೆ ಒಳಗಾಗಿರುವುದು ಖಚಿತವಾದ ನಂತರ ರಜನಿ ಕಾಂದಿವಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದರು.
ಪೊಲೀಸ್ ಇನ್ಸ್ಪೆಕ್ಟರ್ ಕರಣ್ ಗುನಾಜಿ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸೋಹನ್ ಸುರೇಶ್ ರಾವ್ ಕದಂ ಪ್ರಕರಣದ ತನಿಖೆ ನಡೆಸಿದರು. ಬಂಧನದ ಬಳಿಕವೂ ವಂಚನೆಗೆ ಸಂಬಂಧಿಸಿದ ಹಣವನ್ನು ಹಿಂದಿರುಗಿಸಲು ವಿಫಲವಾದ ಹಿನ್ನೆಲೆಯಲ್ಲಿ ದೀಪಿಕಾ ಶೆಟ್ಟಿಯನ್ನು ಮುಂಬೈನ ನಾಗಪಾಡದಲ್ಲಿರುವ ಬೈಕುಲ್ಲಾ ಮಹಿಳಾ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನದಡಿ ಕಳುಹಿಸಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm