ಬ್ರೇಕಿಂಗ್ ನ್ಯೂಸ್
11-07-26 08:37 pm HK News Staffer ಕ್ರೈಂ
ತಿರುವನಂತಪುರಂ , ಜುಲೈ 11: ತುಟಿಗೆ ಉಂಟಾದ ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬಳಿಕ 18 ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಆರೋಪ ಕೇಳಿಬಂದಿದ್ದು, ಅರಿವಳಿಕೆ ತಜ್ಞರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಮಗುವನ್ನು ದೇವನ್ಶ್ ಶೌರ್ಯ (18 ತಿಂಗಳು) ಎಂದು ಗುರುತಿಸಲಾಗಿದೆ. ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆಟವಾಡುವ ವೇಳೆ ತುಟಿಗೆ ಗಾಯ
ದೇವನ್ಶ್, ಇರಾಮಮ್-ಕುಟ್ಟೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇರಂಗಲ್ ನಿವಾಸಿಗಳಾದ ಟಿ. ಸೂರಜ್ ಮತ್ತು ವಿಜಿಶಾ ದಂಪತಿಯ ಏಕೈಕ ಪುತ್ರನಾಗಿದ್ದ. ಮದುವೆಯಾದ ಎಂಟು ವರ್ಷಗಳ ಬಳಿಕ ಈ ದಂಪತಿಗೆ ಮಗು ಜನಿಸಿತ್ತು.
ಜುಲೈ 5ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ದೇವನ್ಶ್ ಬಿದ್ದು ಕೆಳತುಟಿಗೆ ಸಣ್ಣ ಗಾಯವಾಗಿತ್ತು. ಪೋಷಕರು ತಕ್ಷಣವೇ ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಗಾಯಕ್ಕೆ ಹೊಲಿಗೆ ಹಾಕಲು ವೈದ್ಯರು ಅರಿವಳಿಕೆ ನೀಡಿದ್ದರು.
ಅರಿವಳಿಕೆ ಬಳಿಕ ಪ್ರಜ್ಞೆ ಕಳೆದುಕೊಂಡ ಮಗು;
ಅರಿವಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಮಗು ಪ್ರಜ್ಞೆ ಕಳೆದುಕೊಂಡಿದ್ದು, ಆರೋಗ್ಯ ಸ್ಥಿತಿ ತೀವ್ರ ಗಂಭೀರಗೊಂಡಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಣ್ಣೂರಿನಲ್ಲಿರುವ ಆಸ್ಪತ್ರೆಯ ಸುಧಾರಿತ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಸುಮಾರು ಐದು ದಿನಗಳ ಕಾಲ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಿದರೂ ಮಗು ಚೇತರಿಸಿಕೊಳ್ಳದೆ ಶುಕ್ರವಾರ ರಾತ್ರಿ ಮೃತಪಟ್ಟಿದೆ.
ವೈದ್ಯರ ವಿರುದ್ಧ ಪ್ರಕರಣ ದಾಖಲು
ಅರಿವಳಿಕೆಯ ಅತಿಯಾದ ಓವರ್ಡೋಸ್ ನೀಡಿದ್ದರಿಂದ ಮಗುವಿನ ಮೆದುಳು ಹಾನಿಗೊಂಡು ಸಾವನ್ನಪ್ಪಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪಯ್ಯನ್ನೂರು ಪೊಲೀಸರು ಆಸ್ಪತ್ರೆಯ ಅರಿವಳಿಕೆ ತಜ್ಞೆ ಡಾ. ಅಂಜಲಿ ಪೊದುವಾಳ್ ವಿರುದ್ಧ BNS ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವೈದ್ಯಕೀಯ ನಿರ್ಲಕ್ಷ್ಯದ ಆರೋಪ ತಳ್ಳಿಹಾಕಿದ ಆಸ್ಪತ್ರೆ ಆಡಳಿತ ಮಂಡಳಿ
ಆಸ್ಪತ್ರೆ ನೀಡಿರುವ ಹೇಳಿಕೆಯಲ್ಲಿ, "ಅರಿವಳಿಕೆ ನೀಡಿದ ತಕ್ಷಣ ಮಗುವಿಗೆ ಅನಿರೀಕ್ಷಿತ ಹೃದಯ ಸ್ತಂಭನ ಉಂಟಾಯಿತು. ಕೂಡಲೇ ತುರ್ತು ಚಿಕಿತ್ಸೆ ನೀಡಿ ವೆಂಟಿಲೇಟರ್ಗೆ ಸೇರಿಸಲಾಯಿತು. ವೈದ್ಯಕೀಯ ಮಾರ್ಗಸೂಚಿಗಳ ಪ್ರಕಾರವೇ ಚಿಕಿತ್ಸೆ ನೀಡಲಾಗಿದೆ. ಸೂಕ್ತ ಪ್ರಮಾಣದ ಅರಿವಳಿಕೆ ನೀಡಿದರೂ ಕೆಲವೊಮ್ಮೆ ಅಪರೂಪದ ಗಂಭೀರ ಅಡ್ಡಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಮಗುವನ್ನು ಉಳಿಸಲು ಎಲ್ಲಾ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದು ತಿಳಿಸಲಾಗಿದೆ.
ಘಟನೆಯ ನಂತರ ಆಸ್ಪತ್ರೆ ಎದುರು ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm