ಬ್ರೇಕಿಂಗ್ ನ್ಯೂಸ್
13-07-26 02:54 pm HK News Staffer ಕ್ರೈಂ
ನೆಲಮಂಗಲ , ಜುಲೈ 13: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಪ್ರೀತಿಸಿ, ಧರ್ಮಸ್ಥಳದಲ್ಲಿ ಗುಟ್ಟಾಗಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ಮದುವೆಯಾದ ಕೇವಲ ಮೂರು ತಿಂಗಳಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಮೃತರನ್ನು ಗೌರಿಬಿದನೂರು ತಾಲೂಕಿನ ಬೀರಮ್ಮನಹಳ್ಳಿ ನಿವಾಸಿ ತನುಜಾ ಎಂದು ಗುರುತಿಸಲಾಗಿದೆ. ಮೃತ ತನುಜಾ ಯಲಹಂಕದ ಮಾಯಸಂದ್ರ ನಿವಾಸಿ ರವೀಂದ್ರ ಅವರನ್ನು ಕೆಲ ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ.
ಮದುವೆಯ ವಿಚಾರ ರವೀಂದ್ರ ಕುಟುಂಬಕ್ಕೆ ತಿಳಿದಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಬಳಿಕ ಮನೆಯವರೊಂದಿಗೆ ಮಾತನಾಡುವುದಾಗಿ ಹೇಳಿದ್ದ ರವೀಂದ್ರ, ಆರಂಭದಲ್ಲಿ ತನುಜಾರನ್ನು ಪಿಜಿಯಲ್ಲಿ ಇರಿಸಿ, ಬಳಿಕ ಯಲಹಂಕದ ಸಿಂಗಾಪುರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಕ್ಕೆ ವ್ಯವಸ್ಥೆ ಮಾಡಿದ್ದನು.
ಶನಿವಾರ ರಾತ್ರಿ ತನುಜಾ ರವೀಂದ್ರಗೆ ಕರೆ ಮಾಡಿ ಮನೆಗೆ ಬರುವಂತೆ ಕೋರಿದ್ದರು. ಆದರೆ ತಕ್ಷಣ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುತ್ತೇನೆ ಎಂದು ರವೀಂದ್ರ ಹೇಳಿದ್ದಾನೆ. ಇದರಿಂದ ಮನನೊಂದ ತನುಜಾ ಮೊಬೈಲ್ ಸ್ವಿಚ್ ಆಫ್ ಮಾಡಿದ್ದರು.
10 ಗಂಟೆ ವೇಳೆಗೆ ತನುಜಾ ರವೀಂದ್ರಗೆ "ವಿಷ ಕುಡಿದಿದ್ದೇನೆ" ಎಂದು ಸಂದೇಶ ಕಳುಹಿಸಿದ್ದು, ತಾವು ನೆಲಮಂಗಲದ ಬಸವನಹಳ್ಳಿ ಬಳಿ ಇರುವುದಾಗಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರವೀಂದ್ರ, ತನುಜಾವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವಾದ ಸಂದರ್ಭಗಳು ಹಾಗೂ ಘಟನೆಯ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm