ಬ್ರೇಕಿಂಗ್ ನ್ಯೂಸ್
13-07-26 02:54 pm HK News Staffer ಕ್ರೈಂ
ನೆಲಮಂಗಲ , ಜುಲೈ 13: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಪ್ರೀತಿಸಿ, ಧರ್ಮಸ್ಥಳದಲ್ಲಿ ಗುಟ್ಟಾಗಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ಮದುವೆಯಾದ ಕೇವಲ ಮೂರು ತಿಂಗಳಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಮೃತರನ್ನು ಗೌರಿಬಿದನೂರು ತಾಲೂಕಿನ ಬೀರಮ್ಮನಹಳ್ಳಿ ನಿವಾಸಿ ತನುಜಾ ಎಂದು ಗುರುತಿಸಲಾಗಿದೆ. ಮೃತ ತನುಜಾ ಯಲಹಂಕದ ಮಾಯಸಂದ್ರ ನಿವಾಸಿ ರವೀಂದ್ರ ಅವರನ್ನು ಕೆಲ ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ.
ಮದುವೆಯ ವಿಚಾರ ರವೀಂದ್ರ ಕುಟುಂಬಕ್ಕೆ ತಿಳಿದಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಬಳಿಕ ಮನೆಯವರೊಂದಿಗೆ ಮಾತನಾಡುವುದಾಗಿ ಹೇಳಿದ್ದ ರವೀಂದ್ರ, ಆರಂಭದಲ್ಲಿ ತನುಜಾರನ್ನು ಪಿಜಿಯಲ್ಲಿ ಇರಿಸಿ, ಬಳಿಕ ಯಲಹಂಕದ ಸಿಂಗಾಪುರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಕ್ಕೆ ವ್ಯವಸ್ಥೆ ಮಾಡಿದ್ದನು.
ಶನಿವಾರ ರಾತ್ರಿ ತನುಜಾ ರವೀಂದ್ರಗೆ ಕರೆ ಮಾಡಿ ಮನೆಗೆ ಬರುವಂತೆ ಕೋರಿದ್ದರು. ಆದರೆ ತಕ್ಷಣ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುತ್ತೇನೆ ಎಂದು ರವೀಂದ್ರ ಹೇಳಿದ್ದಾನೆ. ಇದರಿಂದ ಮನನೊಂದ ತನುಜಾ ಮೊಬೈಲ್ ಸ್ವಿಚ್ ಆಫ್ ಮಾಡಿದ್ದರು.
10 ಗಂಟೆ ವೇಳೆಗೆ ತನುಜಾ ರವೀಂದ್ರಗೆ "ವಿಷ ಕುಡಿದಿದ್ದೇನೆ" ಎಂದು ಸಂದೇಶ ಕಳುಹಿಸಿದ್ದು, ತಾವು ನೆಲಮಂಗಲದ ಬಸವನಹಳ್ಳಿ ಬಳಿ ಇರುವುದಾಗಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರವೀಂದ್ರ, ತನುಜಾವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವಾದ ಸಂದರ್ಭಗಳು ಹಾಗೂ ಘಟನೆಯ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm