ಬ್ರೇಕಿಂಗ್ ನ್ಯೂಸ್
13-07-26 09:48 pm HK News Staffer ಕ್ರೈಂ
ನವದೆಹಲಿ , ಜುಲೈ 13: ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಗಡಿಪಾರು ಆದೇಶದ ವಿರುದ್ಧ ಆಕ್ಷೇಪಣೆಗಳಿದ್ದರೆ, ಕಾನೂನು ಪ್ರಕಾರ ಸಂಬಂಧಪಟ್ಟ ಸಕ್ಷಮ ಮೇಲ್ಮನವಿ ಪ್ರಾಧಿಕಾರವನ್ನೇ ಸಂಪರ್ಕಿಸಬೇಕು ಎಂದು ನ್ಯಾಯಪೀಠ ಸ್ಪಷ್ಟ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಈಗಾಗಲೇ ಅರ್ಜಿಯನ್ನು ವಜಾಗೊಳಿಸಿರುವುದನ್ನು ಉಲ್ಲೇಖಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳದೆ ನೇರವಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದನ್ನು ನ್ಯಾಯಪೀಠ ಪ್ರಶ್ನಿಸಿತು.
'ಸೌಜನ್ಯ ಪ್ರಕರಣ' ಪ್ರಸ್ತಾಪ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಮಹೇಶ್ ಶೆಟ್ಟಿ ಪರ ವಾದ ಮಂಡಿಸಿದ ವಕೀಲರು, ಗಡಿಪಾರು ಪ್ರಕರಣವನ್ನು ಸೌಜನ್ಯ ಪ್ರಕರಣಕ್ಕೆ ಸಂಯೋಜಿಸಲು ಯತ್ನಿಸಿದರು. ಅಲ್ಲದೆ, ಸ್ಥಳೀಯ ದೇವಸ್ಥಾನಕ್ಕೆ ಸಂಬಂಧಿಸಿದ ವ್ಯಕ್ತಿಗಳು ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಾದಿಸಿದರು.
ಆದರೆ ಈ ವಾದವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತಿರಸ್ಕರಿಸಿತು. ಅಸಂಬಂಧಿತ ವಿಷಯಗಳನ್ನು ಪ್ರಸ್ತಾಪಿಸಿ ಸಾರ್ವಜನಿಕರ ಭಾವನೆಗಳನ್ನು ಕೆರಳಿಸುವುದು ಅಥವಾ ನ್ಯಾಯಾಂಗ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಸಮಂಜಸವಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
'ಈ ನ್ಯಾಯಾಲಯದಲ್ಲಿ ಜೂಜಾಟವಾಡಬೇಡಿ';
ವಿಚಾರಣೆ ವೇಳೆ ನ್ಯಾಯಪೀಠ ವಕೀಲರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು. "ಈ ನ್ಯಾಯಾಲಯದಲ್ಲಿ ಜೂಜಾಟವಾಡಬೇಡಿ. ಒಮ್ಮೆ ಬಾಜಿ ಕಟ್ಟಿದರೆ ಮುಗಿಯಿತು. ಇಲ್ಲಿ ಅಂತಹ ಅವಕಾಶಗಳಿಗೆ ಆಸ್ಪದವಿಲ್ಲ," ಎಂದು ನ್ಯಾಯಪೀಠ ಮೌಖಿಕವಾಗಿ ಆಕ್ಷೇಪ ವ್ಯಕ್ತಪಡಿಸಿತು.
ಗಡಿಪಾರು ಆದೇಶದ ಕುರಿತು ಯಾವುದೇ ಆಕ್ಷೇಪಣೆಗಳಿದ್ದರೆ, ಸಂಬಂಧಪಟ್ಟ ಮೇಲ್ಮನವಿ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಿ ಕಾನೂನುಬದ್ಧ ಪರಿಹಾರ ಪಡೆಯಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಅರ್ಜಿದಾರರಿಗೆ ಯಾವುದೇ ಮಧ್ಯಂತರ ಅಥವಾ ಇತರೆ ಪರಿಹಾರ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿತು.
ಪ್ರಕರಣದ ಹಿನ್ನೆಲೆ
ಅಪರಾಧ ಹಿನ್ನೆಲೆ ಹಾಗೂ ನಿರಂತರವಾಗಿ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಅವರು ಮೊದಲು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನೂ ಇದೀಗ ವಜಾಗೊಳಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm