ಬ್ರೇಕಿಂಗ್ ನ್ಯೂಸ್
13-07-26 09:48 pm HK News Staffer ಕ್ರೈಂ
ನವದೆಹಲಿ , ಜುಲೈ 13: ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಗಡಿಪಾರು ಆದೇಶದ ವಿರುದ್ಧ ಆಕ್ಷೇಪಣೆಗಳಿದ್ದರೆ, ಕಾನೂನು ಪ್ರಕಾರ ಸಂಬಂಧಪಟ್ಟ ಸಕ್ಷಮ ಮೇಲ್ಮನವಿ ಪ್ರಾಧಿಕಾರವನ್ನೇ ಸಂಪರ್ಕಿಸಬೇಕು ಎಂದು ನ್ಯಾಯಪೀಠ ಸ್ಪಷ್ಟ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಈಗಾಗಲೇ ಅರ್ಜಿಯನ್ನು ವಜಾಗೊಳಿಸಿರುವುದನ್ನು ಉಲ್ಲೇಖಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳದೆ ನೇರವಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದನ್ನು ನ್ಯಾಯಪೀಠ ಪ್ರಶ್ನಿಸಿತು.
'ಸೌಜನ್ಯ ಪ್ರಕರಣ' ಪ್ರಸ್ತಾಪ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಮಹೇಶ್ ಶೆಟ್ಟಿ ಪರ ವಾದ ಮಂಡಿಸಿದ ವಕೀಲರು, ಗಡಿಪಾರು ಪ್ರಕರಣವನ್ನು ಸೌಜನ್ಯ ಪ್ರಕರಣಕ್ಕೆ ಸಂಯೋಜಿಸಲು ಯತ್ನಿಸಿದರು. ಅಲ್ಲದೆ, ಸ್ಥಳೀಯ ದೇವಸ್ಥಾನಕ್ಕೆ ಸಂಬಂಧಿಸಿದ ವ್ಯಕ್ತಿಗಳು ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಾದಿಸಿದರು.
ಆದರೆ ಈ ವಾದವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತಿರಸ್ಕರಿಸಿತು. ಅಸಂಬಂಧಿತ ವಿಷಯಗಳನ್ನು ಪ್ರಸ್ತಾಪಿಸಿ ಸಾರ್ವಜನಿಕರ ಭಾವನೆಗಳನ್ನು ಕೆರಳಿಸುವುದು ಅಥವಾ ನ್ಯಾಯಾಂಗ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಸಮಂಜಸವಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
'ಈ ನ್ಯಾಯಾಲಯದಲ್ಲಿ ಜೂಜಾಟವಾಡಬೇಡಿ';
ವಿಚಾರಣೆ ವೇಳೆ ನ್ಯಾಯಪೀಠ ವಕೀಲರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು. "ಈ ನ್ಯಾಯಾಲಯದಲ್ಲಿ ಜೂಜಾಟವಾಡಬೇಡಿ. ಒಮ್ಮೆ ಬಾಜಿ ಕಟ್ಟಿದರೆ ಮುಗಿಯಿತು. ಇಲ್ಲಿ ಅಂತಹ ಅವಕಾಶಗಳಿಗೆ ಆಸ್ಪದವಿಲ್ಲ," ಎಂದು ನ್ಯಾಯಪೀಠ ಮೌಖಿಕವಾಗಿ ಆಕ್ಷೇಪ ವ್ಯಕ್ತಪಡಿಸಿತು.
ಗಡಿಪಾರು ಆದೇಶದ ಕುರಿತು ಯಾವುದೇ ಆಕ್ಷೇಪಣೆಗಳಿದ್ದರೆ, ಸಂಬಂಧಪಟ್ಟ ಮೇಲ್ಮನವಿ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಿ ಕಾನೂನುಬದ್ಧ ಪರಿಹಾರ ಪಡೆಯಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಅರ್ಜಿದಾರರಿಗೆ ಯಾವುದೇ ಮಧ್ಯಂತರ ಅಥವಾ ಇತರೆ ಪರಿಹಾರ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿತು.
ಪ್ರಕರಣದ ಹಿನ್ನೆಲೆ
ಅಪರಾಧ ಹಿನ್ನೆಲೆ ಹಾಗೂ ನಿರಂತರವಾಗಿ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಅವರು ಮೊದಲು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನೂ ಇದೀಗ ವಜಾಗೊಳಿಸಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm