ಬ್ರೇಕಿಂಗ್ ನ್ಯೂಸ್
14-07-26 09:13 pm HK News Staffer ಕ್ರೈಂ
ಕಾರ್ಕಳ, ಜುಲೈ 14: ಮೊಬೈಲ್ ಫೋನ್ಗೆ ಬಂದ ಟ್ರಾಫಿಕ್ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ಒಂದನ್ನು ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ ₹6,83,599 ರೂಪಾಯಿ ಹಣವನ್ನು ದೋಚಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಜೆಕಾರು ನಿವಾಸಿ ರತ್ನಾಕರ ಅಮೀನ್ ಸೈಬರ್ ವಂಚನೆಗೆ ಒಳಗಾದ ದುರ್ದೈವಿ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಐಟಿ ಆಕ್ಟ್ ಹಾಗೂ ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ರತ್ನಾಕರ ಅಮೀನ್ ಅವರು ಜುಲೈ 5 ರಂದು ಮಧ್ಯಾಹ್ನ ತಮ್ಮ ಮನೆಯಲ್ಲಿದ್ದಾಗ, ಅವರ ವಾಟ್ಸಾಪ್ಗೆ ‘ಪರಿವಾಹನ್’ (Parivahan) ಹೆಸರಿನ ಖಾತೆಯಿಂದ ಸಂದೇಶವೊಂದು ಬಂದಿತ್ತು. ಅದರಲ್ಲಿ ನಿಮ್ಮ ವಾಹನವು ಸಂಚಾರ ನಿಯಮ ಉಲ್ಲಂಘಿಸಿದೆ ಎಂದು ತಿಳಿಸಿ, ಅದಕ್ಕೆ ಸಂಬಂಧಿಸಿದ ದಂಡದ ನೋಟಿಸ್ ಇಲ್ಲಿದೆ ಎಂದು ನಂಬಿಸಿ ‘mParivahan.apk’ ಎಂಬ ಆಂಡ್ರಾಯ್ಡ್ ಅಪ್ಲಿಕೇಶನ್ ಫೈಲ್ ಅನ್ನು ಕಳುಹಿಸಲಾಗಿತ್ತು. ಇದನ್ನು ನಿಜವೆಂದು ನಂಬಿದ ರತ್ನಾಕರ್ ಅವರ ಮಗ, ಮೊಬೈಲ್ನಲ್ಲಿ ಆ ಎಪಿಕೆ (APK) ಫೈಲ್ ಅನ್ನು ಡೌನ್ಲೋಡ್ ಮಾಡಿಕೊಂಡಿದ್ದ.
ಅದೇ ದಿನ ರಾತ್ರಿ 8 ಗಂಟೆಗೆ ರತ್ನಾಕರ ಅವರ ಮೊಬೈಲ್ಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ. “ನಿಮ್ಮ ಬ್ಯಾಂಕ್ ಖಾತೆ ಹಾಗೂ ಅದರಲ್ಲಿರುವ ಹಣ ಸುರಕ್ಷಿತವಾಗಿರಬೇಕಾದರೆ ತಕ್ಷಣವೇ ನಿಮ್ಮ ಗೂಗಲ್ ಪಿನ್ (Google PIN) ಸಂಖ್ಯೆಯನ್ನು ಬದಲಾಯಿಸಿ. ಇಲ್ಲದಿದ್ದರೆ ನಿಮ್ಮ ಖಾತೆಯಲ್ಲಿರುವ ಹಣ ಕ್ಷಣಾರ್ಧದಲ್ಲಿ ಕಡಿತಗೊಳ್ಳುತ್ತದೆ (Debit)” ಎಂದು ಹೆದರಿಸಿದ್ದಾನೆ. ಗಾಬರಿಗೊಂಡ ರತ್ನಾಕರ ಅವರು ‘ಹೌದು’ ಎಂದು ಹೇಳಿ ಕರೆ ಕಡಿತಗೊಳಿಸಿದ್ದಾರೆ. ಆದರೆ ಅಷ್ಟರಲ್ಲೇ ಇವರ ಫೋನ್ ನಿಯಂತ್ರಣ ವಂಚಕರ ಕೈಸೇರಿತ್ತು.
ಇದರಿಂದ ಹೆದರಿದ ರತ್ನಾಕರ ಅವರು ಜುಲೈ 8 ರಂದು ಬ್ಯಾಂಕಿಗೆ ತೆರಳಿ ತಮ್ಮ ಖಾತೆಯನ್ನು ಸುರಕ್ಷತೆಯ ದೃಷ್ಟಿಯಿಂದ ಅನ್ಬ್ಲಾಕ್ ಮಾಡಿಸಿಕೊಂಡಿದ್ದರು. ಆದರೆ, ಜುಲೈ 12 ರಂದು ರಾತ್ರಿ 9 ಗಂಟೆಯಿಂದ ರತ್ನಾಕರ ಅವರ ಮೊಬೈಲ್ಗೆ ಬ್ಯಾಂಕ್ ಖಾತೆಯಿಂದ ಸರಣಿ ಹಣ ಕಡಿತದ ಸಂದೇಶಗಳು ಬರಲಾರಂಭಿಸಿವೆ. ವಾಟ್ಸಾಪ್ ಹಾಗೂ ಮೊಬೈಲ್ ಫೋನ್ ಅನ್ನು ಹ್ಯಾಕ್ ಮಾಡಿದ್ದ ಖದೀಮರು ಮೊದಲ ಹಂತದಲ್ಲಿ ₹6,01,901 ರೂಪಾಯಿ ಹಣವನ್ನು ಎಗರಿಸಿದ್ದರು. ತಕ್ಷಣವೇ ರತ್ನಾಕರ ಅವರು ಸೈಬರ್ ಸಹಾಯವಾಣಿ ‘1930’ ಗೆ ಕರೆ ಮಾಡಿ ದೂರು ನೀಡಿದರೂ, ಮರುದಿನ ಜುಲೈ 13 ರಂದು ಬ್ಯಾಂಕಿಗೆ ತೆರಳಿ ಖಾತೆ ಪರಿಶೀಲಿಸಿದಾಗ, ವಂಚಕರು ಒಟ್ಟು ₹6,83,599 ಹಣವನ್ನು ವಿವಿಧ ಅಪರಿಚಿತ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಸಿರುವುದು ಬೆಳಕಿಗೆ ಬಂದಿದೆ. ರತ್ನಾಕರ ಅಮೀನ್ ನೀಡಿದ ದೂರಿನ ಮೇರೆಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm