ಬ್ರೇಕಿಂಗ್ ನ್ಯೂಸ್
15-07-26 12:40 pm HK News Staffer ಕ್ರೈಂ
ಕಾಸರಗೋಡು, ಜುಲೈ 15: ಕಾಸರಗೋಡಿನ ಕಾರಂತಾಕಡ್ ಜಂಕ್ಷನ್ನಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯ ಇದೀಗ ಹೊರಬಿದ್ದಿದ್ದು, ಅಪಘಾತದ ಭೀಕರತೆ ಮತ್ತೊಮ್ಮೆ ಆತಂಕ ಮೂಡಿಸಿದೆ. ಎರಡು ಕಾರುಗಳು ಜಂಕ್ಷನ್ನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಬಳಿಕ, ಇನ್ನೋವಾ ಕಾರು ನಿಯಂತ್ರಣ ತಪ್ಪಿ ಹಲವು ಬಾರಿ ಪಲ್ಟಿಯಾಗಿ ರಸ್ತೆಯಲ್ಲಿ ದೂರದವರೆಗೆ ಉರುಳುತ್ತಾ ವಿದ್ಯುತ್ ಕಂಬ ಹಾಗೂ ಕಟ್ಟಡದ ಗೋಡೆಯ ಸಮೀಪ ಬಂದು ನಿಂತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಇನ್ನೋವಾ ಕಾರಿನಲ್ಲಿ ಮಂಗಳೂರಿನಿಂದ ಕಾಞಂಗಾಡ್ ಕಡೆಗೆ ಸಹೋದರ-ಸಹೋದರಿ ಪ್ರಯಾಣಿಸುತ್ತಿದ್ದರು. ಕಾರು ನಿಯಂತ್ರಣ ತಪ್ಪಿ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ವಾಹನದಲ್ಲಿದ್ದ ಎಲ್ಲಾ ಏರ್ಬ್ಯಾಗ್ಗಳು ಸಮಯಕ್ಕೆ ಸರಿಯಾಗಿ ತೆರೆದ ಪರಿಣಾಮ ಇಬ್ಬರೂ ಗಂಭೀರ ಗಾಯಗಳಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಜೀವ ಉಳಿಸಿಕೊಂಡಿದ್ದಾರೆ.
ಇನ್ನೊಂದೆಡೆ, ಮಧೂರುನಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಮರಳುತ್ತಿದ್ದ ಎರಿಯಾಳ ಮೂಲದ ಯುವತಿ, ಅವರ ತಾಯಿ ಹಾಗೂ ಮಕ್ಕಳು ಪ್ರಯಾಣಿಸುತ್ತಿದ್ದ ಮಾರುತಿ ಕಾರಿಗೂ ಇನ್ನೋವಾ ಗಾಡಿ ಡಿಕ್ಕಿ ಹೊಡದಿದೆ, ಅದೃಷ್ಟವಶಾತ್ ಕಾರಿನ ಏರ್ಬ್ಯಾಗ್ ಓಪನ್ ಆದದರಿಂದ ಸಣ್ಣಪುಟ್ಟ ಗಾಯಗಳಿಂದ ಕುಟುಂಬ ಪಾರಾಗಿದೆ.
ಸಿಸಿಟಿವಿ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕಾರಂತಾಕಡ್ ಜಂಕ್ಷನ್ನ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಆತಂಕ ವ್ಯಕ್ತವಾಗಿದೆ. ಈ ಜಂಕ್ಷನ್ನಲ್ಲಿ ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿರುವ ಹಿನ್ನೆಲೆಯಲ್ಲಿ, ಸ್ಪೀಡ್ ಲಿಮಿಟ್ ವ್ಯವಸ್ಥೆ, ಟ್ರಾಫಿಕ್ ನಿಯಂತ್ರಣ ಹಾಗೂ ಶಾಶ್ವತ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Shocking CCTV from #Kasaragod! A Toyota #Innova flips multiple times after a high-impact crash at #Karanthakkad Junction. Miraculously, everyone survived as the airbags deployed just in time. How many more accidents will it take before authorities fix this notorious black spot? pic.twitter.com/101CN1g910
— Headline Karnataka (@hknewsonline) July 15, 2026
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm