ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ್ಯೂಸಿಕ್ ಸಿಸ್ಟಮ್ ಇಟ್ಟು ಹುಚ್ಚಾಟ, ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನ, ಯುವಕನನ್ನು ವಶಕ್ಕೆ ಪಡೆಯಲು ಪೊಲೀಸರ ಹರಸಾಹಸ

15-07-26 07:02 pm       HK News Staffer   ಕ್ರೈಂ

ರಾಷ್ಟ್ರೀಯ ಹೆದ್ದಾರಿ ಮಧ್ಯೆ ಯುವಕನೊಬ್ಬ ಹುಚ್ಚಾಟ ಮೆರೆದಿದ್ದಾನೆ. ರಸ್ತೆ ಮಧ್ಯೆದಲ್ಲೇ ಟೇಬಲ್ ಹಾಕಿ ಅದರ ಮೇಲೆ ಟಿವಿ, ಮ್ಯೂಸಿಕ್ ಸಿಸ್ಟಂಗಳನ್ನಿಟ್ಟು, ಸಿಕ್ಕ ಸಿಕ್ಕವರ ಮೇಲೆ ಮಚ್ಚು ಬಿಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಕೋಟತಟ್ಟುವಿನ ಬೆಲ್ಲದ ಗಣಪತಿ ದೇವಸ್ಥಾನದ ಬಳಿಯ ನಿವಾಸಿ ರಂಜಿತ್ ಸೋಮಯಾಜಿ (25) ಎಂಬಾತನನ್ನ ಕೋಟ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ, ಜು.15: ರಾಷ್ಟ್ರೀಯ ಹೆದ್ದಾರಿ ಮಧ್ಯೆ ಯುವಕನೊಬ್ಬ ಹುಚ್ಚಾಟ ಮೆರೆದಿದ್ದಾನೆ. ರಸ್ತೆ ಮಧ್ಯೆದಲ್ಲೇ ಟೇಬಲ್ ಹಾಕಿ ಅದರ ಮೇಲೆ ಟಿವಿ, ಮ್ಯೂಸಿಕ್ ಸಿಸ್ಟಂಗಳನ್ನಿಟ್ಟು, ಸಿಕ್ಕ ಸಿಕ್ಕವರ ಮೇಲೆ ಮಚ್ಚು ಬಿಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಕೋಟತಟ್ಟುವಿನ ಬೆಲ್ಲದ ಗಣಪತಿ ದೇವಸ್ಥಾನದ ಬಳಿಯ ನಿವಾಸಿ ರಂಜಿತ್ ಸೋಮಯಾಜಿ (25) ಎಂಬಾತನನ್ನ  ಕೋಟ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಂಜಿತ್ ಕೈಯಲ್ಲಿ ಮಚ್ಚು ಹಿಡಿದು ವಿಚಿತ್ರವಾಗಿ ವರ್ತಿಸುತ್ತಾ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೆಯೂ ಯುವಕ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆತನನ್ನು ವಶಕ್ಕೆ ಪಡೆದಿದ್ದಾರೆ.

ಜುಲೈ14ರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ರಂಜಿತ್ ರಸ್ತೆಯ ಮಧ್ಯದಲ್ಲಿ ಟೇಬಲ್ ಇಟ್ಟು,  ಟಿವಿ ಮತ್ತು ಮ್ಯೂಸಿಕ್ ಸಿಸ್ಟಂ ಅಳವಡಿಸಿ, ಸಂಗೀತ ನುಡಿಸಲು ಪ್ರಾರಂಭಿಸಿದ್ದ, ಇದು ವಾಹನಗಳ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ. ಈತನ ಹುಚ್ಚಾಟ ಕಂಡು ಕೆಲ ಪ್ರಯಾಣಿಕರು ಶಾಕ್ ಆಗಿದ್ದಾರೆ. ಅಸಾಮಾನ್ಯ ದೃಶ್ಯದಿಂದ ಗಾಬರಿಗೊಂಡ ವಾಹನ ಚಾಲಕರು ಮತ್ತು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ರು.

ಮಾಹಿತಿ ತಿಳಿದು ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ರಂಜಿತ್ ಮಚ್ಚು ತೋರಿಸಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದನೆಂದು ಆರೋಪಿಸಲಾಗಿದೆ. ನಂತರ ಆತನನ್ನು  ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಪ್ರಾಥಮಿಕ ವಿಚಾರಣೆಯ ಈ ಯುವಕ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರಬಹುದು ಎಂದು ಶಂಕಿಸಿದ್ದಾರೆ. ಈತ ಮನೋವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆಂದು ಸೂಚಿಸುವ ಯಾವುದೇ ಅಧಿಕೃತ ವೈದ್ಯಕೀಯ ದಾಖಲೆಗಳ ಇಲ್ಲ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.