ಬ್ರೇಕಿಂಗ್ ನ್ಯೂಸ್
15-07-26 07:40 pm HK News Staffer ಕ್ರೈಂ
ಮಂಗಳೂರು, ಜುಲೈ 15: ಭಾರೀ ಕುತೂಹಲ ಮತ್ತು ಸಂಚಲನ ಮೂಡಿಸಿದ್ದ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾರೆಂಬ ದೂರು ಮತ್ತು ಬುರುಡೆ ಮುಂದಿಟ್ಟು ಷಡ್ಯಂತ್ರ ನಡೆಸಿದ್ದಾರೆಂಬ ಆರೋಪದ ಪ್ರಕರಣದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು (ಎಸ್ಐಟಿ) ಒಂದು ವರ್ಷದ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ.
7 ಸಾವಿರಕ್ಕೂ ಅಧಿಕ ಪುಟಗಳ ವರದಿಯನ್ನು ಸಿದ್ಧಪಡಿಸಿರುವ ಎಸ್ಐಟಿ ಅಧಿಕಾರಿಗಳು, ಇದರೊಂದಿಗೆ ಆರೋಪಿಗಳು ಮತ್ತು ಸಾಕ್ಷ್ಯಗಾರರ ಹೇಳಿಕೆಯುಳ್ಳ ವಿಡಿಯೋ ರೆಕಾರ್ಡ್ ಗಳನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಟ್ಟು 255 ಸಾಕ್ಷಿಗಳ ಹೇಳಿಕೆಯನ್ನು ಮತ್ತು ವಿಧಿ ವಿಜ್ಞಾನ ತಂಡ ನೀಡಿರುವ ವರದಿಯನ್ನೂ ದಾಖಲಿಸಲಾಗಿದೆ.
ಬುರುಡೆ, ಅಸ್ಥಿಪಂಜರ, ಮೊಬೈಲ್, ದಾಖಲೆಗಳು ಮತ್ತು ಎಫ್.ಎಸ್.ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾದ ಎಲ್ಲ ರೀತಿಯ ವಸ್ತುಗಳನ್ನು ಕೂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ವೇಳೆ, ಪ್ರಮುಖ ದೂರುದಾರ ಮತ್ತು ಆಬಳಿಕ ಸಾಕ್ಷ್ಯಗಾರನಾಗಿ ಬದಲಾಗಿದ್ದ ಚಿನ್ನಯ್ಯ ಮತ್ತು ಆತನ ಪತ್ನಿ ನ್ಯಾಯಾಲಯದ ಆವರಣಕ್ಕೆ ಬಂದಿದ್ದರು.






ಭಾರೀ ಸಂಚಲನ ಮೂಡಿಸಿದ್ದ ಪ್ರಕರಣ
ಧರ್ಮಸ್ಥಳದಲ್ಲಿ ಪೌರ ಕಾರ್ಮಿಕನಾಗಿ ನಿವೃತ್ತಿ ಪಡೆದು ಹೋಗಿದ್ದ ಚಿನ್ನಯ್ಯ ಸುಮಾರು ಹತ್ತು ವರ್ಷಗಳ ಬಳಿಕ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಹೇಳಿ ಧರ್ಮಸ್ಥಳ ಠಾಣೆಯಲ್ಲಿ 2025ರ ಮೇ ತಿಂಗಳಲ್ಲಿ ದೂರು ನೀಡಿದ್ದು ರಾಜ್ಯ ಮತ್ತು ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಆನಂತರ, ಎಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಯಾಗಿದ್ದಲ್ಲದೆ, ಚಿನ್ನಯ್ಯ ಗುರುತಿಸಿದ್ದ 15 ಜಾಗಗಳಲ್ಲಿ ಎಸ್ಐಟಿ ಅಧಿಕಾರಿಗಳು ಅಗೆದು ಶವಗಳ ಶೋಧ ನಡೆಸಿದ್ದರು. ಆದರೆ ಆತ ಹೇಳಿದಷ್ಟು ಶವಗಳ ಬಗ್ಗೆ ಸಾಕ್ಷ್ಯ ಸಿಗದಿರುವ ಹಿನ್ನೆಲೆಯಲ್ಲಿ ತನಿಖೆ ದೂರುದಾರನ ವಿರುದ್ಧವೇ ತಿರುಗಿತ್ತು.
ಮೊದಲಿಗೆ ಮಾಸ್ಕ್ ಮ್ಯಾನ್ ಆಗಿದ್ದ ಚಿನ್ನಯ್ಯನನ್ನು ಆಗಸ್ಟ್ 23ರಂದು ಎಸ್ಐಟಿ ಬಂಧಿಸಿ ವಿಚಾರಣೆ ನಡೆಸಿತ್ತು. ಬಂಧನದ ಬಳಿಕ ಬುರುಡೆ ಷಡ್ಯಂತ್ರದ ಬಗ್ಗೆ ಹೇಳಿಕೆ ನೀಡಿದ್ದರಿಂದ ಒಟ್ಟು ಪ್ರಕರಣವೇ ತಿರುವು ಮುರುವಾಗಿತ್ತು. ಹೀಗಾಗಿ ಸುಳ್ಳು ದೂರು ಕೊಟ್ಟು ಕ್ಷೇತ್ರದ ಅವಹೇಳನಕ್ಕೆ ಷಡ್ಯಂತ್ರ ನಡೆಸಿದ್ದಾರೆಂದು ಎಸ್ಐಟಿ ಪ್ರಕರಣ ದಾಖಲಿಸಿದ್ದಲ್ಲದೆ, ಪ್ರಕರಣದ A1 ಆರೋಪಿಯಾಗಿ ಚಿನ್ನಯ್ಯನನ್ನು ಗುರುತಿಸಿತ್ತು. ಈ ನಡುವೆ, 2025 ರ ನವೆಂಬರ್ ನಲ್ಲಿ 3,500 ಕ್ಕೂ ಹೆಚ್ಚು ಪುಟಗಳ 'ಸುಳ್ಳು ಸಾಕ್ಷ್ಯ'ದ ಕುರಿತಾಗಿ ಪ್ರಥಮ ವರದಿಯನ್ನು ಎಸ್ಐಟಿ ಕೋರ್ಟಿಗೆ ಸಲ್ಲಿಸಿತ್ತು. ವರದಿಯಲ್ಲಿ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆಂದು ಉಲ್ಲೇಖಿಸಲಾಗಿತ್ತು ಎನ್ನುವ ಮಾಹಿತಿಗಳಿದ್ದವು. ಇದೀಗ ಒಟ್ಟು ಪ್ರಕರಣದ ಬಗ್ಗೆ ಅಂತಿಮ ವರದಿಯನ್ನು ಸಿದ್ದಪಡಿಸಿ ಬೆಳ್ತಂಗಡಿ ಕೋರ್ಟಿಗೆ ಸಲ್ಲಿಸಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm