ಬ್ರೇಕಿಂಗ್ ನ್ಯೂಸ್
16-07-26 02:29 pm HK News Staffer ಕ್ರೈಂ
ಮಂಗಳೂರು, ಜುಲೈ 16: ಜುಲೈ 1ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ವಿದ್ಯುತ್ ಸಬ್ ಸ್ಟೇಶನ್ ಬಳಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಪ್ರಕರಣದಲ್ಲಿ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಅಸಹಜ ಸಾವು ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ತಣ್ಣೀರುಪಂಥ ಗ್ರಾಮದ ನಿವಾಸಿ, ಲಾರಿ ಚಾಲಕನಾಗಿದ್ದ ಮುಶ್ತಾಕ್ ಎಂಬವನ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿತ್ತು. ಪೊಲೀಸರ ತನಿಖೆಯಲ್ಲಿ ಸ್ಥಳದಲ್ಲಿ ಕಳವು ಕೃತ್ಯ ನಡೆದಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2026, ಕಲಂ 331(4),305 ಜೊತೆಗೆ 3(5) ಬಿಎನ್ ಎಸ್-2023 ಪ್ರಕರಣ ದಾಖಲಾಗಿದ್ದು, ಕಳವು ಕೃತ್ಯದ ತನಿಖೆ ನಡೆಸಿದ ಪೊಲೀಸರು ಬೆಳ್ತಂಗಡಿ ಕಾಶಿಪಟ್ನ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ಜುಲೈ 14ರಂದು ದಸ್ತಗಿರಿ ಮಾಡಿದ್ದಾರೆ.
ಆರೋಪಿಯ ವಿಚಾರಣೆಯ ವೇಳೆ ಮೃತ ಮುಶ್ತಾಕ್ ಹಾಗೂ ಇಬ್ರಾಹಿಂ ಲತೀಫ್ (36) ಮತ್ತೋರ್ವ ಆರೋಪಿಯೊಂದಿಗೆ ಸೇರಿ ಜೂನ್ 30 ರಂದು ರಾತ್ರಿ ಬೆಳ್ತಂಗಡಿ ಕುವೆಟ್ಟು ಶಕ್ತಿನಗರ ಎಂಬಲ್ಲಿರುವ ಯೇನಪೋಯ ಸಂಸ್ಥೆಯ ವಿದ್ಯುತ್ ಸಬ್ ಸ್ಟೇಶನ್ ಆವರಣದಲ್ಲಿದ್ದ ಅಲ್ಯೂಮಿನಿಯಂ/ಕಬ್ಬಿಣದ ಸೊತ್ತುಗಳನ್ನು ಕಳವು ಮಾಡಿದ್ದರು. ಈ ವೇಳೆ ಆಕಸ್ಮಿಕವಾಗಿ ಮುಶ್ತಾಕ್ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಮೃತಪಟ್ಟಿರುವುದಾಗಿ ಬಂಧಿತ ಇಬ್ರಾಹಿಂ ಲತೀಫ್ ತಿಳಿಸಿದ್ದಾನೆ. ಆರೋಪಿ ಕಳ್ಳತನ ಮಾಡಿದ ಒಟ್ಟು 550 ಕೆಜಿ ಅಲ್ಯೂಮಿನಿಯಂ ವಯರ್ ಗಳನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿಯ ವಿಚಾರಣೆಯ ವೇಳೆ ವೇಣೂರು ಠಾಣೆ, ಉಪ್ಪಿನಂಗಡಿ ಠಾಣೆ, ಅರೆಹಳ್ಳಿ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣೆಗಳಲ್ಲಿ ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಇನ್ನೊಬ್ಬ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm