ಬ್ರೇಕಿಂಗ್ ನ್ಯೂಸ್
17-07-26 12:58 pm HK News Staffer ಕ್ರೈಂ
ಮಂಗಳೂರು, ಜುಲೈ 17: ಬಿಸಿ ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್ ಗೌಡನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರ ವಲಯದ ಪಚ್ಚನಾಡಿಯಲ್ಲಿ ಇಂದು ಬೆಳಗ್ಗೆ ಇಲಿ ಪಾಷಾಣ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ರಾತ್ರಿ ಯುವತಿ ತಂದೆ ಮತ್ತು ತನ್ನ ಹೆತ್ತವರಿಗೆ ಕರೆ ಮಾಡಿದ್ದ ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ತಾನು ಕೂಡ ಸಾಯೋದಾಗಿ ಹೇಳಿ ಬಳಿಕ ತನ್ನ ಫೋನ್ ಸ್ವಿಚ್ ಆಫ್ ಮಾಡಿದ್ದ. ಆತನ ಪತ್ತೆಗಾಗಿ ಬಂಟ್ವಾಳ ಪೊಲೀಸರು ಬೆನ್ನು ಬಿದ್ದಿದ್ದರು. ರಾತ್ರಿಯೇ ತುಂಬೆ ಟೋಲ್ ಗೇಟ್ ನಲ್ಲಿ ಆತನಿದ್ದ ಕಾರು ಪಾಸ್ ಆಗಿರುವುದನ್ನು ಪತ್ತೆ ಮಾಡಿದ್ದರು. ಇದರಂತೆ, ಮಂಗಳೂರಿನಲ್ಲಿ ಆರೋಪಿ ಅಡಗಿಕೊಂಡಿರುವ ಮಾಹಿತಿ ಇತ್ತು.
ಇಂದು ಬೆಳಗ್ಗೆ ಪಚ್ಚನಾಡಿಯಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಸ್ಥಳೀಯರ ಮೊಬೈಲ್ ಪಡೆದು ಫೋನ್ ಕರೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಸ್ಥಳೀಯರು ಪ್ರಶ್ನಿಸಿ ಬಿಸಿ ರೋಡಿನಲ್ಲಿ ಯುವತಿ ಕೊಂದವನು ಎಂಬುದನ್ನು ಪತ್ತೆ ಮಾಡಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಬಂದು ವಿಚಾರಣೆ ನಡೆಸಿದಾಗ ಇಲಿಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.



“ಆರೋಪಿ ಚೇತನ್ ಮೃತ ಲಾವಣ್ಯಳಿಗೆ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ. ಆದರೆ ಲಾವಣ್ಯ ಈತನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡು, ಬ್ಯಾಗ್ನಲ್ಲಿ ತಂದಿದ್ದ ತಲ್ವಾರ್ನಿಂದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಕಡಿದು ಹತ್ಯೆ ಮಾಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಲಾವಣ್ಯ (21) ಬಂಟ್ವಾಳ ತಾಲೂಕಿನ ಕಕ್ಯಪದವು ನಿವಾಸಿ ಬಾಳಪ್ಪ ಗೌಡ ಎಂಬವರ ಮಗಳಾಗಿದ್ದು ಕಲ್ಲಡ್ಕ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಮೆಡಿಕಲ್ ಸ್ಟೋರ್ ನಲ್ಲಿ ಕೆಲಸಕ್ಕಿದ್ದಳು. ನಿನ್ನೆ ಸಂಜೆ ಎಂದಿನಂತೆ ಮನೆಗೆ ಹಿಂತಿರುಗಲು ಬಿಸಿ ರೋಡ್ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಚೇತನ್ ಹಿಂಬಾಲಿಸಿ ಬಂದು ತಲವಾರಿನಲ್ಲಿ ಕಡಿದು ಹೋಗಿದ್ದ. ಸಾರ್ವಜನಿಕರ ಎದುರಲ್ಲೇ ನಡೆದ ಕೃತ್ಯ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 07:22 pm
HK News Staffer
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm