ಬ್ರೇಕಿಂಗ್ ನ್ಯೂಸ್
17-07-26 08:11 pm HK News Staffer ಕ್ರೈಂ
ಮಂಗಳೂರು, ಜುಲೈ 17 : ನಗರದ ಉರ್ವ ಮಾರ್ಕೆಟ್ ಬಳಿಯ ಮಠದಕಣಿ ಮನೆಯಲ್ಲಿ ಜುಲೈ 11ರಂದು ಮನೆಯ ಬಾಗಿಲು ಒಡೆದು ಚಿನ್ನಾಭರಣ ಕಳವುಗೈದ ಘಟನೆ ನಡೆದಿದ್ದು ಪ್ರಕರಣ ಬೆನ್ನತ್ತಿದ ಬರ್ಕೆ ಠಾಣೆ ಪೊಲೀಸರು ನೇಪಾಳ ಮೂಲದ ಮೂವರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ.
ನೇಪಾಳದ ಚೈನ್ ಪುರ್ ಜಿಲ್ಲೆಯ ಕೇತ್ ಕೊಟ್ ಗ್ರಾಮದ ನಿವಾಸಿ ತಿಲಕ್ ಕುಮಾರ್ ಖಡ್ಕ @ ತಿಲಕ್ ಖಡ್ಕ (36), ಬಜಂಗ್ ಜಿಲ್ಲೆಯ ನಿವಾಸಿ ಅಶೋಕ್ ರಾಜ್ @ ಅಶೋಕ್ ಸಿಂಗ್ @ ಅಶೋಕ್ ಸಿಂಗ್ ಠಾಕುರಿ (33), ಕೈಲಾಲಿ ಜಿಲ್ಲೆಯ ನಿವಾಸಿ ದೀಪೆಂದರ್ ರಸೈಲಿ (25) ಬಂಧಿತರು.
ಜುಲೈ 11ರಂದು ಸಂಜೆ 5.30 ಗಂಟೆಗೆ ಉರ್ವಾ ಮಠದಕಣಿಯಲ್ಲಿ ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ, ವಿಟ್ಲ ಕಡಂಬು ಎಂಬಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದು ಮರುದಿನ ಬೆಳಗ್ಗೆ ಬಂದು ನೋಡಿದಾಗ ಕಳವಾಗಿತ್ತು. ಮನೆಯ ಹಿಂದಿನ ಬಾಗಿಲು ಒಡೆದು ಯಾರೋ ಕಳ್ಳರು ಮನೆಯಲ್ಲಿದ್ದ ಸುಮಾರು 64 ಗ್ರಾಂ ತೂಕದ ಚಿನ್ನಾಭರಣ ಹಾಗೂ ರೂ. 25,000/- ಸೇರಿದಂತೆ ಒಟ್ಟು 8,57,000/- ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿರುವುದು ಕಂಡುಬಂದಿತ್ತು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 70/2026 ಕಲಂ:331(4), 305 BNS ರಂತೆ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ಬರ್ಕೆ ಪೊಲೀಸರು ಜುಲೈ 17 ರ ಬೆಳಗ್ಗಿನ ಜಾವ ನೇಪಾಳ ಮೂಲದ ಮೂರು ಜನ ಕುಖ್ಯಾತ ಮನೆಗಳ್ಳರನ್ನು ಬೋಳೂರಿನಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಆರೋಪಿತರ ಬಳಿಯಿಂದ ಕಳವುಗೈದ ಎಲ್ಲ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದಲ್ಲದೆ, ಮಹಾರಾಷ್ಟ್ರ ರಾಜ್ಯದ ನಾಸಿಕ್ ನಗರದಲ್ಲಿ ಕಳ್ಳತನ ಮಾಡಿದ 790 ಗ್ರಾಂ ಬೆಳ್ಳಿ ಆಭರಣಗಳು ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ.
ಈ ಹಿಂದೆ 2026ನೇ ಮಾರ್ಚ್ ತಿಂಗಳಿನಲ್ಲಿ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನಕ್ಕೆ ಪ್ರಯತ್ನಿಸಿದ್ದು, ಯಾವುದೇ ವಸ್ತುಗಳು ಕಳವಾಗಿರುವುದಿಲ್ಲ. ಅಲ್ಲದೆ ರಾಜ್ಯದ ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ಹಲವಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಮನೆ ಕಳ್ಳತನ ಮಾಡಿದ್ದು ಇವರ ಮೇಲೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ ತಮಿಳುನಾಡು, ದೆಹಲಿ, ಹರ್ಯಾಣ ರಾಜ್ಯಗಳಲ್ಲಿ ಆರೋಪಿತರ ಮೇಲೆ ಪ್ರಕರಣ ದಾಖಲಾಗಿದ್ದು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm