ಬ್ರೇಕಿಂಗ್ ನ್ಯೂಸ್
18-07-26 07:27 pm HK News Staffer ಕ್ರೈಂ
ಮೈಸೂರು, , ಜುಲೈ 19: ಮದುವೆಯಾಗಿ 15 ದಿನದಲ್ಲೇ ಅಪಘಾತದಿಂದ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೈಸೂರು ತಾಲೂಕಿನ ಮೂಗನಹುಂಡಿ ಸಮೀಪ ರಸ್ತೆಗೆ ಅಡ್ಡ ಬಂದ ಕಾಡುಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಕನಹುಂಡಿ ಗ್ರಾಮದ ಮೇಘನಾ (20) ಮೃತಪಟ್ಟವರು. ಇವರಿಗೆ 15 ದಿನಗಳ ಹಿಂದಷ್ಟೇ ನಂಜನಗೂಡು ತಾಲೂಕಿನ ಬಿದರಗೂಡು ಗ್ರಾಮದ ಪುನೀತ್ ಅವರೊಂದಿಗೆ ವಿವಾಹವಾಗಿತ್ತು.
ದಂಪತಿ ಗುರುವಾರ ಮೂಗನಹುಂಡಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ರಾತ್ರಿ ಊಟ ಮುಗಿಸಿ ಸುಮಾರು 9.30ರ ವೇಳೆಗೆ ಬೈಕ್ನಲ್ಲಿ ಊರಿಗೆ ವಾಪಸಾಗುತ್ತಿದ್ದರು. ಮೂಗನಹುಂಡಿ ಸಮೀಪ ರಸ್ತೆಗೆ ಏಕಾಏಕಿ ಕಾಡುಹಂದಿ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿದೆ. ಅಪಘಾತದ ರಭಸಕ್ಕೆ ಇಬ್ಬರೂ ಬೈಕ್ನಿಂದ ಬಿದ್ದರು. ಹೆಲ್ಲೆಟ್ ಧರಿಸಿಕೊಳ್ಳದ್ದರಿಂದ ಮೇಘನಾ ತಲೆಗೆ ಗಂಭೀರ ಗಾಯಗಳಾದವು. ಸಂಬಂಧಿಕರು ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೇಘನಾ ಮೃತಪಟ್ಟರು. ಪುನೀತ್ ತಲೆ, ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm