ಬ್ರೇಕಿಂಗ್ ನ್ಯೂಸ್
20-07-26 07:45 pm HK News Staffer ಕ್ರೈಂ
ಚಿಕ್ಕಬಳ್ಳಾಪುರ, ಜುಲೈ 20: ಜಿಲ್ಲೆಯ ಪೆರೇಸಂದ್ರ ಗ್ರಾಮ… ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಪವರ್ ಸೆಂಟರ್, ಇದು ಸಂಸದ ಡಾ.ಕೆ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ತವರು ಗ್ರಾಮ. ಆದರೆ ಇದೇ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೈದ್ಯರಿಲ್ಲ, ಅಗತ್ಯ ವೈದ್ಯಕೀಯ ಸೌಲಭ್ಯಗಳಿಲ್ಲ ಎಂಬ ಆರೋಪ ಕೇಳಿಬಂದಿದೆ. ತೀವ್ರ ಅಸ್ವಸ್ಥಗೊಂಡ 8 ವರ್ಷದ ಬಾಲಕಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನೆ ಬಳಿಕ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.
ಪೆರೇಸಂದ್ರ ಗ್ರಾಮದ ಚಂದ್ರಿಕಾ ಮತ್ತು ನವೀನ್ ದಂಪತಿಯ 8 ವರ್ಷದ ಪುತ್ರಿ ಶಶಿಕಲಾ ನಿನ್ನೆ ಸಂಜೆ ಮನೆ ಮೇಲೆ ಕೋತಿ ಬಂದಿದೆ ಅಂತ ಭಯದಿಂದ ಮನೆಗೆ ಓಡಿ ಬಂದಿದ್ದಾಳೆ. ಏಕಾಏಕಿ ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಾಳೆ. ಕೂಡಲೇ ಕುಟುಂಬಸ್ಥರು ಆಕೆಯನ್ನ ಪೆರೇಸಂದ್ರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಭಾನುವಾರವಾದ ಕಾರಣ ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಅಗತ್ಯ ವೈದ್ಯಕೀಯ ಉಪಕರಣಗಳೂ ಇಲ್ಲ. ಕರ್ತವ್ಯದಲ್ಲಿದ್ದ ನರ್ಸ್ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ, ಇದರಿಂದ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನೂ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಸ್ಪತ್ರೆ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಬೇಕು. ಆಕ್ಸಿಜನ್ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮಾಹಿತಿ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್, ಬಾಲಕಿ ಆಸ್ಪತ್ರೆಗೆ ಬಂದಾಗಲೇ ಪಲ್ಸ್ ಇರಲಿಲ್ಲ, ಉಸಿರಾಟವೂ ಅತ್ಯಂತ ಕಡಿಮೆ ಇತ್ತು. ಕರ್ತವ್ಯದಲ್ಲಿದ್ದ ಸಿಬ್ಬಂದಿ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲ್ದರ್ಜೆಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದರೆ ಮಾತ್ರ ಸಾವಿನ ನಿಖರ ಕಾರಣ ತಿಳಿಯುತ್ತದೆ ಎಂದರು
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm