ಬ್ರೇಕಿಂಗ್ ನ್ಯೂಸ್
22-07-26 10:24 pm HK News Desk ಕ್ರೈಂ
ಪುತ್ತೂರು, ಜುಲೈ 22 ಕೌಟುಂಬಿಕ ಕಿರುಕುಳದಿಂದ ಸಾವನ್ನಪ್ಪಿದ್ದಾಳೆ ಎನ್ನಲಾದ ಸುಳ್ಯದ ಸಂಪಾಜೆಯ ಮಹಿಳೆಯ ಅಸಹಜ ಸಾವಿನ ಪ್ರಕರಣದಲ್ಲಿ ಸುಳ್ಯ ಪೊಲೀಸರು ಆಕೆಯ ಮಾವ, ಅತ್ತೆ ಮತ್ತು ನಾದಿನಿಯನ್ನು ಬಂಧನ ಮಾಡಿದ್ದಾರೆ.
ತನ್ನ ಮಗಳು ಫಾತಿಮತ್ ನಿಶಾನಾ ಜುಲೈ 18ರಂದು ಫೋನ್ ಮಾಡಿ ಅತ್ತೆ, ಮಾವ ಕಿರುಕುಳ ನೀಡುತ್ತಿದ್ದಾರೆಂದು ಹೇಳಿದ್ದು ಬಳಿಕ ಆಕೆಯ ಮನೆಗೆ ತೆರಳಿದಾಗ ಸಾವನ್ನಪ್ಪಿದ್ದಳು. ಇದಕ್ಕೆ ಆಕೆಯ ಅತ್ತೆ ಮಾವಂದಿರ ಕಿರುಕುಳವೇ ಕಾರಣವೆಂದು ಪುತ್ತೂರು ಕೆದುಂಬಾಡಿ ನಿವಾಸಿ ಜುಬೈದಾ ಸುಳ್ಯ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ಮಾವ ಸಿಪಿ ಅಳವಿ (54), ಅತ್ತೆ ಆಯಿಷಾ ಸಿಎ ಹಾಗೂ ನಾದಿನಿ ಫಸೀಲಾ ಸಿಎ (29) ಎಂಬವರನ್ನು ಬಂಧಿಸಿದ್ದಾರೆ.
ಫಾತಿಮಾಳನ್ನು ನಾಲ್ಕು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಅತ್ತೆ ಮಾವ ಮತ್ತು ನಾದಿನಿ ನಿರಂತರ ಕಿರುಕುಳ ನೀಡಿದ್ದಲ್ಲದೆ, ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮೊನ್ನೆ ಜುಲೈ 18ರಂದು ರಾತ್ರಿ ತನ್ನ ತಾಯಿ ಜೊತೆಗೆ ಫಾತಿಮಾ ಮಾತನಾಡುತ್ತಿದ್ದಾಗಲೇ ಮಾವ ಅಳವಿ ಫೋನ್ ಕಿತ್ತುಕೊಂಡು ನಿನ್ನ ಮಗಳನ್ನು ಕೊಂದೇ ತೀರುತ್ತೇನೆಂದು ಹೇಳಿದ್ದರು. ಮರುದಿನ ಬೆಳಗ್ಗೆ ನೋಡಿದರೆ ಫಾತಿಮಾ ಮೃತಪಟ್ಟ ಸ್ಥಿತಿಯಲ್ಲಿದ್ದಳು. ಗಂಡನಿಲ್ಲದ ಸಮಯದಲ್ಲಿ ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಫಾತಿಮಾ ಸಾವಿಗೆ ಶರಣಾಗಿದ್ದೇ, ಇವರೇ ಕುತ್ತಿಗೆ ಹಿಸುಕಿ ಕೊಲೆಗೈದರೇ ಎನ್ನುವ ಪ್ರಶ್ನೆಗಳಿವೆ. ಸದ್ಯ ಮೂವರ ಬಂಧನವಾಗಿದ್ದು ವಿಚಾರಣೆ ಬಳಿಕ ಸಾವಿನ ಕಾರಣ ತಿಳಿಯಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm