ಬ್ರೇಕಿಂಗ್ ನ್ಯೂಸ್
24-07-26 08:57 pm HK News Staffer ಕ್ರೈಂ
ಬೆಂಗಳೂರು, ಜುಲೈ 24 : ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬಳು ಮಹಾರಾಷ್ಟ್ರ ಕ್ರಿಕೆಟ್ ತಂಡದ ಆಟಗಾರನ ನಗ್ನ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ 20 ವರ್ಷದ ಕ್ರಿಕೆಟಿಗ ನೀಡಿದ ದೂರಿನ ಮೇರೆಗೆ ಯುವತಿ ವಿರುದ್ದ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ ಹಿನ್ನೆಲೆಯಲ್ಲಿ ದೂರುದಾರ ಕ್ರಿಕೆಟಿಗ ಮಹಾರಾಷ್ಟ್ರದಿಂದ ಬೆಂಗಳೂರು ನಗರಕ್ಕೆ ಬಂದು ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದರು. ಇದೇ ವೇಳೆ, ಡೇಟಿಂಗ್ ಆ್ಯಪ್ನಲ್ಲಿ ನೋಂದಾಯಿಸಿಕೊಂಡಿದ್ದ ಆಟಗಾರನಿಗೆ ಜುಲೈ 17ರಂದು ರಾತ್ರಿ ಅಪರಿಚಿತ ಯುವತಿಯಿಂದ ಮೆಸೇಜ್ ಬಂದಿದೆ. ವಾಟ್ಸಾಪ್ ಕರೆಯಲ್ಲಿ ಮಾತನಾಡುವಂತೆ ಹೇಳಿ ತನ್ನ ನಂಬರ್ ಶೇರ್ ಮಾಡಿದ್ದಳು. ಬಳಿಕ ಇಬ್ಬರು ವಾಟ್ಸಾಪ್ ವಿಡಿಯೋ ಕರೆಯಲ್ಲಿ ಮಾತನಾಡಿದ್ದರು. ಈ ವೇಳೆ, ಯುವತಿ ತನ್ನ ಮೈ ಮೇಲಿನ ಬಟ್ಟೆ ಬಿಚ್ಚಿದ್ದಾಳೆ. ಅದರಿಂದ ಪ್ರಚೋದನೆಗೊಂಡ ಕ್ರಿಕೆಟಿಗ ಕೂಡ ತನ್ನ ಬಟ್ಟೆಯನ್ನು ಕಳಚಿ ನಗ್ನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಸ್ಕ್ರೀನ್ ಶಾಟ್, ಹಣಕ್ಕೆ ಬೇಡಿಕೆ
ಆನಂತರ ಕ್ರಿಕೆಟಿಗ ನಗ್ನವಾಗಿರುವ ವಿಡಿಯೋವನ್ನು ಸ್ಕ್ರೀನ್ ಶಾಟ್ ಮೂಲಕ ಪಡೆದಿದ್ದು ಅದನ್ನು ಮರಳಿ ಯುವಕನಿಗೆ ಕಳುಹಿಸಿದ್ದಳು. ಕೆಲ ಹೊತ್ತಿನ ಬಳಿಕ ಕರೆ ಮಾಡಿ ವಿಡಿಯೋ ಜಾಲತಾಣದಲ್ಲಿ ಹಾಕಿ ಮಾನಹಾನಿ ಮಾಡುವುದಾಗಿ ಬೆದರಿಸಿದ ಯುವತಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಗಾಬರಿಗೊಂಡ ಆತ ಆನ್ಲೈನ್ ಮೂಲಕ 1500 ರೂ. ಕಳುಹಿಸಿದ್ದಾನೆ. ಆದರೂ ಹೆಚ್ಚಿನ ಹಣ ನೀಡುವಂತೆ ಯುವತಿ ಒತ್ತಾಯಿಸಿದ್ದಳು. ಹೀಗಾಗಿ ಆರೋಪಿತ ಯುವತಿ ವಿರುದ್ಧ ಕ್ರಿಕೆಟಿಗ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm