ಬ್ರೇಕಿಂಗ್ ನ್ಯೂಸ್
24-07-26 08:57 pm HK News Staffer ಕ್ರೈಂ
ಬೆಂಗಳೂರು, ಜುಲೈ 24 : ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬಳು ಮಹಾರಾಷ್ಟ್ರ ಕ್ರಿಕೆಟ್ ತಂಡದ ಆಟಗಾರನ ನಗ್ನ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ 20 ವರ್ಷದ ಕ್ರಿಕೆಟಿಗ ನೀಡಿದ ದೂರಿನ ಮೇರೆಗೆ ಯುವತಿ ವಿರುದ್ದ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ ಹಿನ್ನೆಲೆಯಲ್ಲಿ ದೂರುದಾರ ಕ್ರಿಕೆಟಿಗ ಮಹಾರಾಷ್ಟ್ರದಿಂದ ಬೆಂಗಳೂರು ನಗರಕ್ಕೆ ಬಂದು ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದರು. ಇದೇ ವೇಳೆ, ಡೇಟಿಂಗ್ ಆ್ಯಪ್ನಲ್ಲಿ ನೋಂದಾಯಿಸಿಕೊಂಡಿದ್ದ ಆಟಗಾರನಿಗೆ ಜುಲೈ 17ರಂದು ರಾತ್ರಿ ಅಪರಿಚಿತ ಯುವತಿಯಿಂದ ಮೆಸೇಜ್ ಬಂದಿದೆ. ವಾಟ್ಸಾಪ್ ಕರೆಯಲ್ಲಿ ಮಾತನಾಡುವಂತೆ ಹೇಳಿ ತನ್ನ ನಂಬರ್ ಶೇರ್ ಮಾಡಿದ್ದಳು. ಬಳಿಕ ಇಬ್ಬರು ವಾಟ್ಸಾಪ್ ವಿಡಿಯೋ ಕರೆಯಲ್ಲಿ ಮಾತನಾಡಿದ್ದರು. ಈ ವೇಳೆ, ಯುವತಿ ತನ್ನ ಮೈ ಮೇಲಿನ ಬಟ್ಟೆ ಬಿಚ್ಚಿದ್ದಾಳೆ. ಅದರಿಂದ ಪ್ರಚೋದನೆಗೊಂಡ ಕ್ರಿಕೆಟಿಗ ಕೂಡ ತನ್ನ ಬಟ್ಟೆಯನ್ನು ಕಳಚಿ ನಗ್ನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಸ್ಕ್ರೀನ್ ಶಾಟ್, ಹಣಕ್ಕೆ ಬೇಡಿಕೆ
ಆನಂತರ ಕ್ರಿಕೆಟಿಗ ನಗ್ನವಾಗಿರುವ ವಿಡಿಯೋವನ್ನು ಸ್ಕ್ರೀನ್ ಶಾಟ್ ಮೂಲಕ ಪಡೆದಿದ್ದು ಅದನ್ನು ಮರಳಿ ಯುವಕನಿಗೆ ಕಳುಹಿಸಿದ್ದಳು. ಕೆಲ ಹೊತ್ತಿನ ಬಳಿಕ ಕರೆ ಮಾಡಿ ವಿಡಿಯೋ ಜಾಲತಾಣದಲ್ಲಿ ಹಾಕಿ ಮಾನಹಾನಿ ಮಾಡುವುದಾಗಿ ಬೆದರಿಸಿದ ಯುವತಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಗಾಬರಿಗೊಂಡ ಆತ ಆನ್ಲೈನ್ ಮೂಲಕ 1500 ರೂ. ಕಳುಹಿಸಿದ್ದಾನೆ. ಆದರೂ ಹೆಚ್ಚಿನ ಹಣ ನೀಡುವಂತೆ ಯುವತಿ ಒತ್ತಾಯಿಸಿದ್ದಳು. ಹೀಗಾಗಿ ಆರೋಪಿತ ಯುವತಿ ವಿರುದ್ಧ ಕ್ರಿಕೆಟಿಗ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm