ಬ್ರೇಕಿಂಗ್ ನ್ಯೂಸ್
28-07-26 12:28 pm HK News Staffer ಕ್ರೈಂ
ಬೆಂಗಳೂರು, ಜುಲೈ 28: ವಿಚ್ಛೇದಿತ ಮಹಿಳೆಯನ್ನ ಫೇಸ್ಬುಕ್ನಲ್ಲಿ ಪರಿಚಯಿಸಿಕೊಂಡು ವಿಶ್ವಾಸ ಗಳಿಸಿ ಬಳಿಕ ವಿದೇಶದಿಂದ ದುಬಾರಿ ಬೆಲೆಯ ಗಿಫ್ಟ್ ಕಳುಹಿಸಿರುವುದಾಗಿ ನಂಬಿಸಿ, ಇದನ್ನ ಪಡೆಯಲು ಕಸ್ಟಮ್ ಫೀಸ್ ನೆಪದಲ್ಲಿ 1.5 ಕೋಟಿ ರೂ. ಪಡೆದು ವಂಚಿಸಿದ್ದ ಸೈಬರ್ ವಂಚಕರ ವಿರುದ್ಧ ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
52 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಸಾಹಿಲ್ ಜುಗ್ಗಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಗಂಡನಿಂದ ದೂರವಾಗಿ ವಿಚ್ಛೇದನ ಪಡೆದಿದ್ದ ಯಶವಂತಪುರ ನಿವಾಸಿಯಾಗಿರುವ ಮಹಿಳೆಗೆ ಕೆಲ ತಿಂಗಳ ಹಿಂದೆ ಫೇಸ್ಬುಕ್ನಲ್ಲಿ ಸಾಹಿಲ್ ಪರಿಚಯವಾಗಿದ್ದ. ಕ್ರಮೇಣ ಮೊಬೈಲ್ ನಂಬರ್ ವರ್ಗಾಯಿಸಿಕೊಂಡು ಇಬ್ಬರು ಪರಸ್ಪರ ಕರೆ ಮಾಡಿ ಮಾತನಾಡಿದ್ದಾರೆ. ಯುಕೆಯಲ್ಲಿ ತಾನು ನೆಲೆಸಿದ್ದು, ಉಡುಗೊರೆ ನೆಪದಲ್ಲಿ ಸೀರೆಯನ್ನ ಕೊರಿಯರ್ ಮಾಡಿರುವುದಾಗಿ ಸುಳ್ಳು ಹೇಳಿ ಕೊರಿಯರ್ ಮಾಡಿರುವ ನಕಲಿ ರಶೀದಿ ಕಳುಹಿಸಿದ್ದ. ಪಾರ್ಸೆಲ್ನಲ್ಲಿ ಚಿನ್ನ ಹಾಗೂ ವಜ್ರಾಭರಣವಿದೆ ಎಂದು ಮಹಿಳೆಯನ್ನ ನಂಬಿಸಿದ್ದ. ಬಳಿಕ ದೆಹಲಿ ಏರ್ಪೋರ್ಟ್ನಲ್ಲಿ ಕಸ್ಟಮ್ ನಿಂದ ತೊಂದರೆಯಾಗಿದೆ. ಸುಂಕ ಪಾವತಿಸಿದ ಬಳಿಕ ದುಬಾರಿ ಬೆಲೆಯ ಗಿಫ್ಟ್ಗಳನ್ನು ಪಡೆಯುವಂತೆ ಮಹಿಳೆಗೆ ಹೇಳಿದ್ದ. ದೂರುದಾರ ಮಹಿಳೆಗೆ ಏರ್ಪೋರ್ಟ್ ಕಸ್ಟಮ್ ಅಧಿಕಾರಿ ಸೋಗಿನಲ್ಲಿ ಸೈಬರ್ ಖದೀಮರು ಕರೆ ಮಾಡಿ, ತಮ್ಮ ಹೆಸರಿನಲ್ಲಿ ಗಿಫ್ಟ್ ಬಂದಿವೆ. ಇದನ್ನ ಬಿಡಿಸಿಕೊಳ್ಳಲು ಹಣ ಪಾವತಿಸಬೇಕು ಎಂದು ಹೇಳಿದ್ದಾರೆ. ಇದನ್ನ ನಂಬಿದ ಮಹಿಳೆಯು 40 ಲಕ್ಷ ಹಣವನ್ನ ಆರ್ಟಿಜಿಎಸ್ ಮೂಲಕ ಪಾವತಿಸಿದ್ದಾರೆ. ಇದಾದ ಬಳಿಕ ಮತ್ತೆ ಕರೆ ಮಾಡಿ ಇನ್ನೂ ಹೆಚ್ಚಿನ ಹಣ ನೀಡುವಂತೆ ಬೇಡಿಕೆಯಿಟ್ಟು ನಿರ್ದಿಷ್ಟ ಸ್ಥಳಕ್ಕೆ ಬರುವಂತೆ ಹೇಳಿ ಆರೋಪಿಯ ಸಹಚರರನ್ನ ಕಳುಹಿಸಿ ಹಣ ತೆಗೆದುಕೊಳ್ಳುತ್ತಿದ್ದರು. ಹೀಗೆ ಹಂತ - ಹಂತವಾಗಿ 1.75 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ಧಾರೆ.
ಸೈಬರ್ ವಂಚನೆಗಳ ಕುರಿತು ಪೊಲೀಸ್ ಇಲಾಖೆ, ಬ್ಯಾಂಕ್ಗಳು ಹಾಗೂ ಮಾಧ್ಯಮಗಳು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ, ಅಪರಿಚಿತರ ಮಾತುಗಳನ್ನು ಕಣ್ಮುಚ್ಚಿ ನಂಬುವ ಪ್ರವೃತ್ತಿ ಇನ್ನೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿದೇಶದಿಂದ ಉಡುಗೊರೆ, ಕಸ್ಟಮ್ಸ್ ಶುಲ್ಕ ಅಥವಾ ಲಾಟರಿ ಹೆಸರಿನಲ್ಲಿ ಹಣ ಕೇಳಿದರೆ ಅದು ಬಹುತೇಕ ವಂಚನೆಯೇ ಎಂಬ ಅರಿವು ನಾಗರಿಕರಲ್ಲಿ ಮೂಡಬೇಕಿದೆ. ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಕಷ್ಟಪಟ್ಟು ಗಳಿಸಿದ ಹಣವನ್ನು ಕಳೆದುಕೊಳ್ಳುವುದನ್ನು ತಪ್ಪಿಸಬಹುದಾಗಿದೆ. ಅಪರಿಚಿತರ ಮಾತಿಗೆ ಮರುಳಾಗುವ ಬದಲು, ಯಾವುದೇ ಹಣಕಾಸಿನ ವ್ಯವಹಾರಕ್ಕೂ ಮುನ್ನ ಪೊಲೀಸ್ ಅಥವಾ ಸೈಬರ್ ಸಹಾಯವಾಣಿಯಿಂದ ಮಾಹಿತಿ ಪಡೆದು ದೃಢಪಡಿಸಿಕೊಳ್ಳುವುದು ಅತ್ಯಗತ್ಯ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 12:28 pm
HK News Staffer
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm