ಬ್ರೇಕಿಂಗ್ ನ್ಯೂಸ್
29-07-26 10:40 am HK News Staffer ಕ್ರೈಂ
ಉಳ್ಳಾಲ, ಜು.29 : ಕೊರಗಜ್ಜನ ಕಟ್ಟೆಗೆ ದೀಪ ಬೆಳಗಿಸಿ ಮನೆಗೆ ಹಿಂತಿರುಗುತ್ತಿದ್ದ ವೃದ್ಧರೋರ್ವರಿಗೆ ಅಪರಿಚಿತ ಕಾರೊಂದು ರಭಸದಿಂದ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ರಾ.ಹೆ. 66 ರ ಅಂಬಿಕಾರೋಡ್ ಎಂಬಲ್ಲಿ ನಡೆದಿದ್ದು, ಘಟನೆಯಿಂದ ಎರಡೂ ಕಾಲು ಮುರಿತಕ್ಕೊಳಗಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಅಂಬಿಕಾ ರೋಡ್ ಬಳಿಯ ಸತ್ಯನಾರಾಯಣ ಕಂಪೌಂಡ್ ನಿವಾಸಿ ದಾಮೋದರ ಪೂಜಾರಿ(72) ಮೃತ ವ್ಯಕ್ತಿ.
ದಾಮೋದರ್ ಅವರು ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿಯಲ್ಲಿರುವ ಕೊರಗಜ್ಜನ ಕಟ್ಟೆಯ ಚಾಕರಿ(ಸೇವೆ) ಕಾರ್ಯ ಮಾಡುತ್ತಿದ್ದರು. ನಿನ್ನೆ (ಮಂಗಳವಾರ) ರಾತ್ರಿ 7 ಗಂಟೆಗೆ ಕೊರಗಜ್ಜನ ಸಾನಿಧ್ಯದಲ್ಲಿ ದೀಪ ಬೆಳಗಿಸಿ ಮನೆಗೆ ಹಿಂತಿರುಗಲು ಹೆದ್ದಾರಿ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ತಲಪಾಡಿಯಿಂದ ತೊಕ್ಕೊಟ್ಟಿನ ಕಡೆಗೆ ವೇಗವಾಗಿ ಧಾವಿಸುತ್ತಿದ್ದ ಬಿಳಿ ಕಾರೊಂದು ದಾಮೋದರ್ ಅವರಿಗೆ ರಭಸದಿಂದ ಢಿಕ್ಕಿ ಹೊಡೆದು ಕನಿಷ್ಟ ಮಾನವೀಯತೆ ತೋರದೆ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ದಾಮೋದರ್ ಅವರ ಎರಡು ಕಾಲುಗಳು ಮುರಿತಕ್ಕೊಳಗಾಗಿ ದೂರಕ್ಕೆ ಎಸೆಯಲ್ಪಟ್ಟಿದ್ದರು. ಕೂಡಲೇ ಸ್ಥಳೀಯರು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ. ಮೃತರು ಪತ್ನಿ , ಓರ್ವ ಪುತ್ರ, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.

ಹೆದ್ದಾರಿ ಅವ್ಯವಸ್ಥೆ ವಿರುದ್ಧ ಆಕ್ರೋಶ
ರಾ.ಹೆ 66ರ ಕುಂಪಲ ಕಾಪಿಕಾಡಿನಿಂದ ತಲಪಾಡಿಯ ವರೆಗಿನ ರಸ್ತೆಯಲ್ಲಿ ದಾರಿದೀಪಗಳನ್ನೇ ಅಳವಡಿಸಲಾಗಿಲ್ಲ. ಇದರ ಬಗ್ಗೆ ಕಳೆದ ವಾರ ಸೋಮೇಶ್ವರ ಪುರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನ ಹಿಗ್ಗಾ ಮುಗ್ಗಾ ತರಾಟೆಗೈದಿದ್ದರು. ರಸ್ತೆಯಲ್ಲಿ ದಾರಿ ದೀಪಗಳು ಇಲ್ಲದೇ ಇರುವ ಪರಿಣಾಮ ಹಿಟ್& ರನ್ ಸಂದರ್ಭಗಳಲ್ಲಿ ಸಿಸಿ ಕ್ಯಾಮೆರಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಪತ್ತೆ ಹಚ್ಚಲು ಪೊಲೀಸರಿಗೆ ಕಷ್ಟವಾಗಿದೆ.
ಹೆದ್ದಾರಿಗೆ ಸಮರ್ಪಕ ಸರ್ವಿಸ್ ರಸ್ತೆಗಳೂ ಇಲ್ಲ. ತೊಕ್ಕೊಟ್ಟುವಿನಿಂದ ತಲಪಾಡಿ ವರೆಗೂ ಹೆದ್ದಾರಿಯಲ್ಲಿ ಕ್ಯಾಮೆರಾಗಳನ್ನ ಅಳವಡಿಸಲಾಗಿಲ್ಲ. ರಸ್ತೆಯ ಡಿವೈಡರ್ ಗಳಿಗೆ ತಡೆ ಬೇಲಿಗಳನ್ನ ಅಳವಡಿಸದ ಪರಿಣಾಮ ಜನರು ಹೆದ್ದಾರಿಯನ್ನ ದಾಟಲು ಹೋಗಿ ನಿತ್ಯ ಅಪಘಾತಗಳು ಸಂಭವಿಸುವಂತಾಗಿದೆ. ಹೆದ್ದಾರಿ ಅವ್ಯವಸ್ಥೆಯನ್ನ ಕೂಡಲೇ ಸರಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm